ಜಿ.ಪರಮೇಶ್ವರ್ 
ರಾಜಕೀಯ

ರಾಜಕೀಯ ಕುತಂತ್ರದಿಂದಾಗಿ ಮೂರು ಬಾರಿ ಸಿಎಂ ಆಗುವ ಅವಕಾಶ ಕೈ ತಪ್ಪಿತು: ಪರಮೇಶ್ವರ್

ರಾಜ್ಯದ ಜನರ ಸೇವೆ ಮಾಡಲು ನನಗೆ ಮೂರು ಸಲ ಮುಖ್ಯಮಂತ್ರಿ ಆಗುವ ಅವಕಾಶವಿತ್ತು ಎಂದು ಮಾಜಿ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.

ಕೊರಟಗೆರೆ: ರಾಜ್ಯದ ಜನರ ಸೇವೆ ಮಾಡಲು ನನಗೆ ಮೂರು ಸಲ ಮುಖ್ಯಮಂತ್ರಿ ಆಗುವ ಅವಕಾಶವಿತ್ತು ಎಂದು ಮಾಜಿ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನ ಕೊರಟಗೆರೆ ಕಾರ್ಯಕ್ರಮದಲ್ಲಿಂದು ಮಾತನಾಡಿದ ಅವರು, ರಾಜಕೀಯ ದೊಂಬರಾಟದ ನಡುವೆ ನನಗೆ ಸಿಎಂ ಆಗುವ ಅವಕಾಶ ಕೈತಪ್ಪಿದೆ ಎಂದು ಅವರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ರಾಜ್ಯದ ಸರಕಾರಿ ಇಲಾಖೆಯ ಅಧಿಕಾರಿಗಳಿಗೆ ಉನ್ನತ ಸ್ಥಾನ ನೀಡಲು ಜಾತಿಯ ಲೆಕ್ಕಾಚಾರವೇ ಮುಖ್ಯಪಾತ್ರ ವಹಿಸುತ್ತದೆ. ಆಡಳಿತ ನಡೆಸುವ ರಾಜಕಾರಣಿಗಳ ಸಮುದಾಯಕ್ಕೆ ಮುಖ್ಯಸ್ಥಾನ ಕೊಡುತ್ತಿರುವುದು ದುರ್ದೈವದ ಸಂಗತಿಯಾಗಿದೆ. ಸರಕಾರ ನಡೆಸುವ ರಾಜಕಾರಣಿಗಳ ಮನಸ್ಸು ಬದಲಾವಣೆ ಆದಾಗ ಮಾತ್ರ ಜಾತಿಯ ವ್ಯವಸ್ಥೆ ಬದಲಾಗಲು ಸಾಧ್ಯ ಎಂದು ಹೇಳಿದ ಜಿ.ಪರಮೇಶ್ವರ್ ಜಾತಿ ವ್ಯವಸ್ಥೆಯ ಕರಾಳತೆಯ ಕುರಿತು ಕಳವಳ ವ್ಯಕ್ತಪಡಿಸಿದರು.

ಇನ್ನು ರಾಜಕಾರಣಿಗಳ ಸಮುದಾಯಕ್ಕೆ ಮುಖ್ಯಸ್ಥಾನ ಕೊಡುತ್ತಿರುವುದು ದುರ್ದೈವವಾಗಿದೆ, ಸರ್ಕಾರ ನಡೆಸುವ ರಾಜಕಾರಣಿಗಳ ಮನಸ್ಸು ಬದಲಾವಣೆ ಆದರೆ ಮಾತ್ರ ಜಾತಿಯ ವ್ಯವಸ್ಥೆ ಬದಲಾಗಲು ಸಾಧ್ಯವಾಗುತ್ತದೆ ಎಂದು ಡಾ. ಜಿ ಪರಮೇಶ್ವರ್ ಅವರು ಕೊರಟಗೆರೆಯ ಖಾಸಗಿ ಕಾರ್ಯಕ್ರಮದಲ್ಲಿ ತಮ್ಮ ನೋವು ತೋಡಿಕೊಂಡ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT