ರಾಜುಗೌಡ 
ರಾಜಕೀಯ

ಸಚಿವ ಸ್ಥಾನ ಸಿಗದಂತೆ ನಮ್ಮವರಿಂದಲೇ ಕುತಂತ್ರ:ಅವರಿಗೆ ಒಳ್ಳೆಯದಾಗಲಿ; ರಾಜುಗೌಡ

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ, ನನಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಪ್ರಯತ್ನಿಸಿದ್ದರು. ಆದರೆ, ನಮ್ಮ ಪಕ್ಷದವರೇ ನನಗೆ ಸಚಿವ ಸ್ಥಾನ ಸಿಗದಂತೆ ಆಟವಾಡಿದ್ದಾರೆ ಎಂದು ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕ ರಾಜು ಗೌಡ ಆರೋಪಿಸಿದ್ದಾರೆ.

ಬೆಂಗಳೂರು: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ, ನನಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಪ್ರಯತ್ನಿಸಿದ್ದರು. ಆದರೆ, ನಮ್ಮ ಪಕ್ಷದವರೇ ನನಗೆ ಸಚಿವ ಸ್ಥಾನ ಸಿಗದಂತೆ ಆಟವಾಡಿದ್ದಾರೆ ಎಂದು ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕ ರಾಜು ಗೌಡ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕ ಭಾಗದಲ್ಲಿ 16 ಜನ ಶಾಸಕರು ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ. ಈ ಪೈಕಿ ಕನಿಷ್ಠ ಮೂವರಿಗಾದರೂ ಸಚಿವ ಸ್ಥಾನ ನೀಡಬೇಕಾಗಿತ್ತು. ಆದರೆ, ನಮ್ಮ ಯಾದಗಿರಿ ಜಿಲ್ಲೆಗಾಗಲಿ ಅಥವಾ ರಾಯಚೂರು ಜಿಲ್ಲೆಗಾಗಲಿ ಒಂದೇ ಒಂದು ಸಚಿವ ಸ್ಥಾನವನ್ನೂ ನೀಡಲಿಲ್ಲ. ನನಗೆ ಸಚಿವ ಸ್ಥಾನ ನೀಡಲು ಯಡಿಯೂರಪ್ಪ ಸಹ ಮನಸ್ಸು ಮಾಡಿದ್ದರು. ಆದರೆ, ಕೊನೆಗಳಿಗೆಯಲ್ಲಿ ಸ್ಥಾನ ಕೈತಪ್ಪಿದೆ. ನಮ್ಮವರೇ ನನಗೆ ಸ್ಥಾನ ಸಿಗದಂತೆ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ನಮ್ಮ ಸಮುದಾಯಕ್ಕೆ ಶೇಕಡಾ7.5ರಷ್ಟು ಮಿಸಲಾತಿ ನೀಡಿ ಎಂದು ಕೇಳಿಕೊಂಡಿದ್ದೇನೆ. ನನ್ನ ಸಚಿವ ಸ್ಥಾನ ತಪ್ಪಿಸಿದವರಿಗೂ ಒಳ್ಳೆಯದಾಗಲಿ, ಸಚಿವರು ಯಾರಾದರೂ ಒಳ್ಳೆಯದೇ, ಯಡಿಯೂರಪ್ಪ ಅವರು ನಮ್ಮ ಜೊತೆಗಿದ್ದಾರೆ ಸಾಕು ಎಂದು ಹೇಳಿರುವ ಅವರು, ಈ ಹಿಂದೆ ಸಚಿವನಾಗಿ ಕೆಲಸ ಮಾಡಿದ ಅನುಭವ ಇದೆ. ಹೀಗಾಗಿ ಪಕ್ಷದಿಂದಲೂ ಸಂಘದಿಂದಲೂ ನನಗೆ ಸಚಿವ ಸ್ಥಾನದ ಭರವಸೆ ಸಿಕ್ಕಿತ್ತು. ಆದರೆ, ಕೊನೆ ಕ್ಷಣದಲ್ಲಿ ನಾನು ನೋ ಬಾಲ್​ಗೆ ರನೌಟ್ ಆಗಿದ್ದೇನೆ. 

ರನೌಟ್ ಆಗಿದ್ದಕ್ಕೆ ಕೊರಗಿದೆ. ನಾನೊಬ್ಬ ಕ್ರೀಡಾಪಟು ಹೀಗಾಗಿ ಸೋಲು ಗೆಲುವು ನನಗೆ ಹೊಸತಲ್ಲ. ಆದರೆ, ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕನಿಷ್ಠ 3 ರಿಂದ 4 ಸಚಿವ ಸ್ಥಾನ ನೀಡಲಿ, ಈ ಭಾಗದ ಅಭಿವೃದ್ಧಿಯ ಕಡೆಗೆ ಸರ್ಕಾರ ಗಮನ ಹರಿಸಲಿ ಎಂಬುದಷ್ಟೆ ನನ್ನ ಕೋರಿಕೆ ಎಂದು ಅವರು ಪಕ್ಷದ ಮುಖಂಡರ ಎದುರು ಮನವಿಯನ್ನು ಇಟ್ಟಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT