ರಾಜಕೀಯ

ಕಾಂಗ್ರೆಸ್ ಜೊತೆಗೆ ಮೈತ್ರಿ ಮುಗಿದ ಅಧ್ಯಾಯ- ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ

Nagaraja AB

ಹಾಸನ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ  ವಿರುದ್ಧ ಮುಗಿ ಬೀಳುತ್ತಿದ್ದಂತೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಬಹುತೇಕ ಮುಗಿದ ಅಧ್ಯಾಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ  ಹೆಚ್ . ಕೆ. ಕುಮಾರಸ್ವಾಮಿ ಹೇಳಿದ್ದಾರೆ.

ಮೈತ್ರಿ ಸರ್ಕಾರ ಪತನಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಸಿದ್ದರಾಮಯ್ಯ ನಡುವಿನ ಆರೋಪ, ಪ್ರತ್ಯಾರೋಪ ದುರದೃಷ್ಟಕರವಾದದ್ದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ

ನಾಯಕರ ನಡುವೆ ಮಾತ್ರ ಮೈತ್ರಿ ಮಾಡಿಕೊಳ್ಳಲಾಗಿತ್ತು. ಆದರೆ, ಉಭಯ ಪಕ್ಷಗಳ ಕಾರ್ಯಕರ್ತರನ್ನು ತಲುಪವಲ್ಲಿ ವಿಫಲವಾಗಿತ್ತು. ಮೈತ್ರಿ ಮುಂದುವರೆದರೆ ಉಭಯ ಪಕ್ಷಗಳಿಗೂ ಭವಿಷ್ಯವಿಲ್ಲ ಎಂದಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮೈತ್ರಿ ಸರ್ಕಾರದ ರಚನೆಗೆ ನಿರ್ಧರಿಸಿದ್ದರು ಎಂದು ಅವರು ಹೇಳಿದ್ದಾರೆ.

SCROLL FOR NEXT