ಡಿಕೆ ಶಿವಕುಮಾರ್ 
ರಾಜಕೀಯ

ಕೆಪಿಸಿಸಿ ಅಧ್ಯಕ್ಷ ಗಾದಿಗೆ ಡಿ.ಕೆ.ಶಿವಕುಮಾರ್ ಲಾಬಿ, ಸೋನಿಯಾಗಾಂಧಿ ಭೇಟಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನಡುವೆ ಆರೋಪ ಪ್ರತ್ಯಾರೋಪ ತೀವ್ರಗೊಂಡಿರುವ ಬೆನ್ನೆಲ್ಲೇ ಮಾಜಿ ಸಚಿವ....

ನವದೆಹಲಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನಡುವೆ ಆರೋಪ ಪ್ರತ್ಯಾರೋಪ ತೀವ್ರಗೊಂಡಿರುವ ಬೆನ್ನೆಲ್ಲೇ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ಲಾಬಿ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯ ಅವರಿಗೆ ವಿಧಾನಸಭೆ ಪ್ರತಿಪಕ್ಷ ಹುದ್ದೆ ತಪ್ಪಿಸುವ, ಪಕ್ಷದಲ್ಲಿ ಅವರ ಹಿಡಿತ ಕಡಿಮೆ ಮಾಡುವ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ತಾವೇ ಪಡೆದುಕೊಳ್ಳುವ ಉದ್ದೇಶದಿಂದ ಡಿ.ಕೆ. ಶಿವಕುಮಾರ್ ವರಿಷ್ಠರ ಮೇಲೆ ಪ್ರಭಾವ ಬೀರುವ ಯತ್ನದಲ್ಲಿ ನಿರತರಾಗಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ಮಧ್ಯಾಹ್ನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಮಾಡಿದ ಶಿವಕುಮಾರ್, ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಸೋನಿಯಾ ಗಾಂಧಿ ಅವರಿಗೆ ಮಾಹಿತಿ ನೀಡಿದ್ದಾರೆ. ಜತೆಗೆ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಅವರೇ ಕಾರಣ ಎಂದು ಸಹ ಆರೋಪಿಸಿರುವುದಾಗಿ ತಿಳಿದು ಬಂದಿದೆ. 

ಡಿಕೆಶಿ ಹಾಗೂ ಸೋನಿಯಾ ಗಾಂಧಿ ಅವರ ಮಧ್ಯೆ ವಿಸ್ತೃತ ಸಂಭಾಷಣೆ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಡಿಕೆಶಿಗೆ ಸೋನಿಯಾ ಗಾಂಧಿ ತಿಳಿಸಿದ್ದು, ಇದಕ್ಕೆ ಡಿಕೆಶಿ ಸಹ ಕೆಲ ಷರತ್ತುಗಳನ್ನು ವಿಧಿಸಿ ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ದೆಹಲಿಯಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನಾನು ಯಾವುದೇ ಸ್ಥಾನಕ್ಕೂ ಅರ್ಜಿ ಹಾಕಿಕೊಂಡು ಓಡಾಡುವುದಿಲ್ಲ. ಸುಮ್ಮನೆ ಟಿವಿಯಲ್ಲಿ ನನ್ನ ಹೆಸರು ಹಾಕುತ್ತೀರಿ. ಹೀಗೆ ಹಾಕಿ ನನಗೆ ಯಾವ ಹುದ್ದೆಯೂ ಸಿಗದಂತೆ ಮಾಡುತ್ತೀರಿ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT