ವಿಎಸ್ ಉಗ್ರಪ್ಪ 
ರಾಜಕೀಯ

ಕೇಂದ್ರ ಸರ್ಕಾರ ಕಾಟಾಚಾರಕ್ಕೆ ಅಧ್ಯಯನ ತಂಡ ಕಳುಹಿಸಿದೆ- ವಿ.ಎಸ್. ಉಗ್ರಪ್ಪ

ಕೇಂದ್ರ ಸರ್ಕಾರ ಕಟಾಚಾರಕ್ಕೆ ಅಧ್ಯಯನ ತಂಡ ಕಳುಹಿಸಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕೇಂದ್ರ ಸರ್ಕಾರ ಕಟಾಚಾರಕ್ಕೆ ಅಧ್ಯಯನ ತಂಡ ಕಳುಹಿಸಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕೇಂದ್ರ ಸರ್ಕಾರ ತುರ್ತು ನಿರ್ವಹಣೆಗಾಗಿ ಕನಿಷ್ಠ 3 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವ ಬದಲು ಅಧ್ಯಯನ ತಂಡ ಕಳುಹಿಸಿದೆ. ಇದರ ವರದಿ ಆಧರಿಸಿ ಪರಿಹಾರ ಬಿಡುಗಡೆ ಯಾವಾಗ ಎಂದು ಪ್ರಶ್ನಿಸಿದರು.

ಕೇಂದ್ರದ ನೆರೆ ಅಧ್ಯಯನ ತಂಡ ಪ್ರವಾಹ ಸಂತ್ರಸ್ತ ಸ್ಥಳಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಸಮಗ್ರವಾಗಿ ಅಧ್ಯಯನ ಮಾಡುತ್ತಿಲ್ಲ. 1029 ಕೋಟಿ ರೂಪಾಯಿ  ಬರ ಪರಿಹಾರದ ನೆರವು ಪ್ರಕಟಿಸಿದೆ. ಆದರೆ, ಅತಿವೃಷ್ಟಿ ಪರಿಹಾರಕ್ಕಾಗಿ ಬಿಡಿಗಾಸನ್ನು ಬಿಡುಗಡೆ ಮಾಡಿಲ್ಲ. ಸಚಿವರು ಖಾತೆಗಾಗಿ ಕಿತ್ತಾಟದಲ್ಲೇ ಸರ್ಕಾರ ಸಂಪೂರ್ಣ ಮುಳುಗಿದೆ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರ ಅಧ್ಯಯನ ತಂಡ ನಡೆಸುತ್ತಿರುವ ಸಮೀಕ್ಷೆಯ ಮಾಹಿತಿ ನಮ್ಮ ಗಮನಕ್ಕೆ ಬಂದಿದೆ. ಕಾಟಾಚಾರಕ್ಕೆ ಎಂಬಂತೆ ಅವರು ಅಧ್ಯಯನ ಮಾಡುತ್ತಿದ್ದಾರೆ. ಇವರಿಂದ ಪರಿಹಾರ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಕೇಂದ್ರದಿಂದ ಹಣ ಬಿಡುಗಡೆಯೂ ಆಗುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!