ಜಗದೀಶ್ ಶೆಟ್ಟರ್ 
ರಾಜಕೀಯ

ಉಪಮುಖ್ಯಮಂತ್ರಿ ಹುದ್ದೆ ಅಸಂವಿಧಾನಿಕ ಹುದ್ದೆ : ಸಚಿವ ಜಗದೀಶ್ ಶೆಟ್ಟರ್ 

ಉಪ ಮುಖ್ಯಮಂತ್ರಿ ಸ್ಥಾನ ಎನ್ನುವುದು ಅಸಾಂವಿಧಾನಿಕ ಹುದ್ದೆ , ಅದಕ್ಕೆ  ಸಂವಿಧಾನದಲ್ಲಿ ಮಾನ್ಯತೆ ಇಲ್ಲ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ, ಭೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಉಪಮುಖ್ಯಮಂತ್ರಿ ಹುದ್ದಗೆ ಕಿಮ್ಮತ್ತಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಹುಬ್ಬಳ್ಳಿ:  ಉಪ ಮುಖ್ಯಮಂತ್ರಿ ಸ್ಥಾನ ಎನ್ನುವುದು ಅಸಾಂವಿಧಾನಿಕ ಹುದ್ದೆ , ಅದಕ್ಕೆ  ಸಂವಿಧಾನದಲ್ಲಿ ಮಾನ್ಯತೆ ಇಲ್ಲ, ಕೇವಲ ಗೌರವ ನೀಡುವ ಉದ್ದೇಶದಿಂದ ಸೃಷ್ಟಿಯಾಗಿರುವ ಹುದ್ದೆ  ಹೀಗಾಗಿ ತಮಗೆ  ಉಪ ಮುಖ್ಯಮಂತ್ರಿ ಹುದ್ದೆ  ಕೊಟ್ಟಿದ್ದರೂ ತೆಗೆದುಕೊಳ್ಳುತ್ತಿರಲಿಲ್ಲ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ, ಭೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಉಪಮುಖ್ಯಮಂತ್ರಿ ಹುದ್ದಗೆ ಕಿಮ್ಮತ್ತಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ವರಿಷ್ಠರು ತೆಗೆದುಕೊಂಡ  ನಿರ್ಧಾರದಂತೆ ನಡೆದುಕೊಳ್ಳುತ್ತೇವೆ. ನಮ್ಮ ಪಕ್ಷದಲ್ಲಿ ಭಿನ್ನಮತ ಇಲ್ಲ. ಏನೇ ಗೊಂದಲಗಳಿದ್ದರೂ ಮೂರು ನಾಲ್ಕು ದಿನಗಳಲ್ಲಿ ಎಲ್ಲ ವೂ ಸರಿಯಾಗಲಿದೆ ಎಂದರು. 

ಖಾತೆಗಳ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ. ಸಿ.ಟಿ.ರವಿ ಅವರಿಗೆ ಖಾತೆ ಬಗ್ಗೆ ಬೇಸರವಾಗಿದ್ದರೆ ತಾವು ಅವರ ಜತೆ ತಾವು ಖುದ್ದಾಗಿ ಮಾತಾಡುವುದಾಗಿ ಶೆಟ್ಟರ್ ಹೇಳಿದರು. 

ಮೈತ್ರಿ ಸರ್ಕಾರದ ವಿಚಾರದಲ್ಲಿ ನಾವು ಹೇಳಿದ್ದೆಲ್ಲ ಸತ್ಯವಾಗಿದೆ. ಅದು  ಅನೈತಿಕ ಮೈತ್ರಿಯಾಗಿದ್ದ ಕಾರಣ ಸರ್ಕಾರ ಪತನವಾಯಿತು. ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಹಾಗೂ ಯಡಿಯೂರಪ್ಪ ಅವರ ಮೇಲೆ ಯಾಕೆ  ಇಷ್ಟೊಂದು ಪ್ರೀತಿ ಹುಟ್ಟಿದೆ ಎಂದು ಅರ್ಥವಾಗುತ್ತಿಲ್ಲ. ಮೊದಲು ಅವರ ಪಕ್ಷ  ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರಿಗೆ ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ  ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರಲ್ಲೇ ಸ್ಪರ್ಧೆ ಏರ್ಪಟ್ಟಿದೆ. ಹೀಗಿರುವಾಗ  ಇನ್ನೊಂದು ಪಕ್ಷದ ಮೇಲೆ, ನಾಯಕರ ಮೇಲೆ ಅನುಕಂಪ ತೋರುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಸಚಿವ ಜಗದೀಶ್ ಶೆಟ್ಟರ್ ಕಟುಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT