ಹೆಚ್ ಡಿ ಕುಮಾರಸ್ವಾಮಿ 
ರಾಜಕೀಯ

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್!

ಜಂತಕಲ್ ಗಣಿ ಪರವಾನಿಗೆ ನವೀಕರಣ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ರಿಲೀಫ್ ದೊರೆತಿದೆ. 

ಬೆಂಗಳೂರು: ಜಂತಕಲ್ ಗಣಿ ಪರವಾನಿಗೆ ನವೀಕರಣ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ರಿಲೀಫ್ ದೊರೆತಿದೆ. 

ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ದೋಷಾರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಕುಮಾರಸ್ವಾಮಿ ಅವರ ಹೆಸರನ್ನು ಕೈಬಿಟ್ಟಿದೆ. 

ಎಸ್ ಐಟಿ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಗಗನ್ ಬಡೇರಿಯಾ ಹಾಗೂ ವಿನೋದ್ ಗೋಯಲ್ ಹೆಸರು ಉಲ್ಲೇಖಿಸಲಾಗಿದೆ. ಜಂತಕಲ್ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ನಡೆದ ವಿಚಾರಣೆ ವೇಳೆ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಕುಮಾರಸ್ವಾಮಿ ಅವರ ಹೆಸರನ್ನು ಉಲ್ಲೇಖಿಸಿದ್ದರು. 

ವಿನೋದ್ ಗೋಯಲ್ ಗೆ ಭೂಮಿ ಮಂಜೂರು ಮಾಡುವಂತೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಮಗೆ ಮೌಖಿಕ ಆದೇಶ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಹೇಳಿದ್ದಾರೆ. ಬಡೇರಿಯಾ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರನ್ನು ಎಸ್‍ಐಟಿ ವಿಚಾರಣೆಗೆ ಒಳಪಡಿಸಿತ್ತು. ಇನ್ನು ವಿನೋದ್ ಗೋಯಲ್ ಮೂಲಕ ತನ್ನ ಮಗ ಗಗನ್ ಬಡೇರಿಯಾ ಅಕೌಂಟ್‍ಗೆ ಗಂಗಾರಾಮ್ ಹಣ ಹಾಕಿಸಿಕೊಂಡಿದ್ದರು ಎಂಬ ಆರೋಪವೂ ಇದೆ. ಗಂಗಾರಾಮ್ ಐಎಎಸ್ ಅಧಿಕಾರಿ ಆದ್ದರಿಂದ ಸರ್ಕಾರದ ಅನುಮತಿ ಕೇಳಬೇಕು. ಹೀಗಾಗಿ ಗಂಗಾರಾಮ್ ಬಡೇರಿಯಾ ಮೇಲೆ ದೋಷಾರೋಪ ಪಟ್ಟಿ ಹಾಕಲು ಸರ್ಕಾರದ ಅನುಮತಿ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಘೋಯಲ್ ಮತ್ತು ಗಗನ್ ಬಡೇರಿಯಾ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?