ಸಿದ್ದರಾಮಯ್ಯ-ಸಿಟಿ ರವಿ 
ರಾಜಕೀಯ

ರಾಷ್ಟ್ರಕ್ಕೆ ಒಂದೇ ಧ್ವಜ, ಎರಡೆರಡು ಬೇಡ; ನಾಡಧ್ವಜ ಬೇಡ ಎಂಬ ಸಿಟಿ ರವಿ ಹೇಳಿಕೆಗೆ ಕನ್ನಡಿಗರಿಂದ ಆಕ್ರೋಶ!

ರಾಷ್ಟ್ರಕ್ಕೆ ಒಂದೇ ಧ್ವಜ ಇರಲಿ. ಕರ್ನಾಟಕಕ್ಕೆ ಪ್ರತ್ಯೇಕವಾದ ಅಧಿಕೃತ ನಾಡ ಧ್ವಜದ ಅಗತ್ಯವಿಲ್ಲ ಎಂಬ ಸಚಿವ ಸಿಟಿ ರವಿ ಅವರ ಹೇಳಿಕೆಗೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ರವಿ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಷ್ಟ್ರಕ್ಕೆ ಒಂದೇ ಧ್ವಜ ಇರಲಿ. ಕರ್ನಾಟಕಕ್ಕೆ ಪ್ರತ್ಯೇಕವಾದ ಅಧಿಕೃತ ನಾಡ ಧ್ವಜದ ಅಗತ್ಯವಿಲ್ಲ ಎಂಬ ಸಚಿವ ಸಿಟಿ ರವಿ ಅವರ ಹೇಳಿಕೆಗೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ರವಿ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಡಧ್ವಜವನ್ನು ಸಾಂಸ್ಕೃತಿಕವಾಗಿ ಬಳಸಲು ಅವಕಾಶವಿದೆಯೇ ಹೊರತು ಸಾಂವಿಧಾನಾತ್ಮಕವಾಗಿ ಬಳಸಲು ಸಾಧ್ಯವಿಲ್ಲ. ಇಡೀ ರಾಷ್ಟ್ರಕ್ಕೆ ಒಂದೇ ತ್ರಿವರ್ಣ ಧ್ವಜ ಮಾತ್ರ ಬಳಕೆ ಮಾಡಲು ಧ್ವಜ ಸಂಹಿತೆಯಲ್ಲಿ ಅವಕಾಶ ಇದೆ ಎಂದು ಹೇಳುವ ಮೂಲಕ ಪ್ರತ್ಯೇಕ ಕನ್ನಡ ನಾಡ ಧ್ವಜ ಪ್ರಸ್ತಾವನೆ ಕೈಬಿಟ್ಟಿರುವುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ. 

ಸಿಟಿ ರವಿ ಅವರ ಈ ಹೇಳಿಕೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದು ಕನ್ನಡ ಬಾವುಟದ ಹಿರಿಮೆ ಗೊತ್ತಿಲ್ಲದ ಜನಪ್ರತಿನಿಧಿಗಳು ಯಾರೇ ಆಗಲಿ ರಾಜ್ಯ ಬಿಟ್ಟು ತೊಲಗಲಿ. ನೆಲ ಜಲಗಡಿ ಭಾಷೆ ಇವುಗಳ ಮೇಲೆ ಸ್ವಾಭಿಮಾನ ಇಲ್ಲದ ಬಿಜೆಪಿಯವರು ಮಾತ್ರ ಕನ್ನಡದ ಅಸ್ಮಿತೆಗೆ ಕನ್ನಡದ ಧ್ವಜಕ್ಕೆ ಅವಮಾನ ಮಾಡುವ ಆಲೋಚನೆ ಮಾಡಲು ಸಾಧ್ಯ ಎಂದು ಹಲವರು ಛೇಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT