ಅನಿಲ್ ಲಾಡ್ 
ರಾಜಕೀಯ

ಕೊನೆ ಕ್ಷಣದಲ್ಲಿ ಕೈ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಪರ ಪ್ರಚಾರಕ್ಕಿಳಿದ ಅನಿಲ್ ಲಾಡ್ 

ಉಪ ಚುನಾವಣೆಗೆ ಇನ್ನೂ ಕೇವಲ ಮೂರು ದಿನಗಳು ಬಾಕಿ ಇರುವಂತೆಯೇ ಕೊನೆ ಕ್ಷಣದಲ್ಲಿ ವಿಜಯನಗರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಪರ ಅನಿಲ್ ಲಾಡ್ ಪ್ರಚಾರ ನಡೆಸಿದ್ದಾರೆ.

ಹೊಸಪೇಟೆ: ಉಪ ಚುನಾವಣೆಗೆ ಇನ್ನೂ ಕೇವಲ ಮೂರು ದಿನಗಳು ಬಾಕಿ ಇರುವಂತೆಯೇ ಕೊನೆ ಕ್ಷಣದಲ್ಲಿ ವಿಜಯನಗರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಪರ ಅನಿಲ್ ಲಾಡ್ ಪ್ರಚಾರ ನಡೆಸಿದ್ದಾರೆ.

 ಮೊನ್ನೆಯಷ್ಟೇ ಬಿಜೆಪಿ ಸೇರ್ಪಡೆಗೊಳ್ಳಲು ಚಿಂತನೆ ನಡೆಸಿದ್ದ ಅನಿಲ್ ಲಾಡ್ ಇಬ್ಬಂದಿ ನೀತಿ ಅನುಸರಿಸುತ್ತಿದ್ದಾರೆ. ಬಿಜೆಪಿಯ ಯಾವೊಬ್ಬ ಮುಖಂಡರು ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಮುಖಭಂಗ ಅನುಸರಿಸಿದ್ದಾರೆ. 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅನಿಲ್ ಲಾಡ್, ಬಿಜೆಪಿ ಪಕ್ಷಕ್ಕೆ ಬರುವಂತೆ ಮೊದಲು ಆನಂದ್ ಸಿಂಗ್ ಅವರೇ ಆಹ್ವಾನ ನೀಡಿದ್ರು. ಆದರೆ, ನಂತರ ಅವರ ಮೊಬೈಲ್ ಸ್ವೀಚ್ ಆಫ್ ಆಗಿತ್ತು. ರಾಮುಲು ಸೇರಿದಂತೆ ಬಿಜೆಪಿ ಕಡೆಯಿಂದ ಯಾವುದೇ ಸ್ಪಂದನೆ ದೊರೆಯಲಿಲ್ಲ. ಜಿಂದಾಲ್ ವಿಚಾರದಲ್ಲಿ ಆನಂದ ಸಿಂಗ್ ಜೊತೆಗೆ ಸೇರಿ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಟ ಮಾಡಿದೆ. ಆದರೆ, ಆನಂದ್ ಸಿಂಗ್ ನನಗೆ ಕೈ ಕೊಟ್ಟು ಬಿಜೆಪಿ ಸೇರ್ಪಡೆಯಾದ್ರು, ನನ್ನ ಕೈಗೆ ಸಿಗಲೇ ಇಲ್ಲ ಎಂದು ಹೇಳಿದರು. 

ಆನಂದ ಸಿಂಗ್ ಸೂರ್ಯ ಇದ್ದಂಗೆ ಬೆಳಕು ಕೊಡ್ತಾನೆ. ಹತ್ತಿರ ಹೋದ್ರೇ ಸುಟ್ಟು ಬಿಡ್ತಾನೆ ಎಂದು ವಾಗ್ದಾಳಿ ನಡೆಸಿದ ಅನಿಲ್ ಲಾಡ್, 
ಪರೋಕ್ಷವಾಗಿ ನಾನು ಕಾಂಗ್ರೆಸ್ ನಲ್ಲಿ ಇಲ್ಲ ಎಂದು ಸ್ಪಷ್ಪಪಡಿಸಿದರು. ವೆಂಕಟರಾವ್ ಘೋರ್ಪಡೆ  ನಮ್ಮ ಮಹಾರಾಜರು. ಅವರು ಕರೆದಿದ್ದಾರೆಂದು ಪ್ರಚಾರಕ್ಕೆ ಬಂದಿದ್ದೇನೆ. ಸದ್ಯ ಕಾಂಗ್ರೆಸ್ ನಲ್ಲೇ ಇರುವುದಾಗಿ ತಿಳಿಸಿದರು. ಅತಂತ್ರವಾಗಿ ಮಾತನಾಡಿದ ಅನಿಲ್ ಲಾಡ್ ಸದ್ಯ ಎತ್ತ ಹೋಗಬೇಕನ್ನೋದೇ ಅವರಿಗೆ ಗೊತ್ತಾಗುತ್ತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT