ಡಿಕೆ ಶಿವಕುಮಾರ್ 
ರಾಜಕೀಯ

ಉಪ ಚುನಾವಣೆ: ಅನರ್ಹರನ್ನು ಸೋಲಿಸುವುದೇ ಗುರಿ- ಡಿಕೆ ಶಿವಕುಮಾರ್ 

ಉಪ ಚುನಾವಣೆಯಲ್ಲಿ ಅನರ್ಹ ಶಾಸಕರನ್ನು ಸೋಲಿಸುವುದೇ ತಮ್ಮ ಗುರಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಉಪ ಚುನಾವಣೆ ಬಹಿರಂಗ  ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು, ವಿವಿಧ ಪಕ್ಷಗಳ ಘಟಾನುಘಟಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೊನೆಯ ಹಂತದ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಹೊಸಕೋಟೆ ಮತ್ತು ಯಶವಂತಪುರ ಕ್ಷೇತ್ರಗಳಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಗಳ ಪರವಾಗಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. 

ಇದಕ್ಕೂ ಮುನ್ನ ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಡಿಕೆಶಿ, ಅನರ್ಹರನ್ನು ಸೋಲಿಸುವುದೇ ತಮ್ಮ ಗುರಿಯಾಗಿದ್ದು, ಪಕ್ಷಕ್ಕೂ  ಹಾಗೂ ಜನರಿಗೂ ಮೋಸ ಮಾಡಿದವರನ್ನು ಮತದಾರರು ಪುನರ್ ಆಯ್ಕೆ ಮಾಡುವುದಿಲ್ಲ ಎಂದರು. 

ಹಿರಿಯ  ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ, ಮಾಜಿ ಲೋಕಾಯುಕ್ತ ಸಂತೋಷ ಹೆಗ್ಟೆ, ನ್ಯಾಯಮೂರ್ತಿ ಗೋಪಾಲಗೌಡರು, ಸಾಹಿತಿ ದೇವನೂರು ಮಹದೇವ ಸೇರಿದಂತೆ ಹಲವು ಗಣ್ಯರು ಅನರ್ಹರು ಸೋಲಬೇಕು, ಪ್ರಜಾಪ್ರಭುತ್ವ  ಉಳಿಸಬೇಕು ಎಂದು ಕರೆದ್ದಾರೆ. ಜನರು ಅನರ್ಹರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT