ಸಂಗ್ರಹ ಚಿತ್ರ 
ರಾಜಕೀಯ

ಸ್ಥಿರ ಸರ್ಕಾರಕ್ಕಾಗಿ ಇತರರನ್ನು ಅವಲಂಬಿಸುವ ಸಂಕಷ್ಟ ತಪ್ಪಿಸಲು 15 ಸ್ಥಾನ ಗೆಲ್ಲಿಸಿ: ಯಡಿಯೂರಪ್ಪ ಮನವಿ

ಸ್ಥಿರ ಸರ್ಕಾರಕ್ಕಾಗಿ ಇತರರನ್ನು ಅವಲಂಬಿಸುವ ಸಂಕಷ್ಟ ತಪ್ಪಿಸಲು 15 ಸ್ಥಾನ ಗೆಲ್ಲಿಸಿ ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಕಾಗವಾಡ: ಸ್ಥಿರ ಸರ್ಕಾರಕ್ಕಾಗಿ ಇತರರನ್ನು ಅವಲಂಬಿಸುವ ಸಂಕಷ್ಟ ತಪ್ಪಿಸಲು 15 ಸ್ಥಾನ ಗೆಲ್ಲಿಸಿ ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಈ ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಸ್ಪಷ್ಟ ಬಹುಮತ ಇರಲಿಲ್ಲ. ಹಾಗಾಗಿ ಇತರರನ್ನು ಅವಲಂಬಿಸುವ ಸಂಕಷ್ಟ ಬಂದಿತ್ತು. ಆದರೆ ಈ ಬಾರಿ ಉಪ ಚುನಾವಣೆಯಲ್ಲಿ ಸ್ಪಷ್ಟ ಜನಾದೇಶ ನೀಡುವ ಮೂಲಕ ಸ್ಥಿರ ಸರ್ಕಾರ ನೀಡಲು ಮತದಾರರು ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಕಾಗವಾಡದ ಕ್ಷೇತ್ರದ ಕೆಂಪವಾಡದಲ್ಲಿ ಮಾತನಾಡಿದ ಅವರು, ಎರಡು ದಿನ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇನೆ. ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳ ಸಂತೋಷದಿಂದ ಕ್ಷೇತ್ರದಿಂದ ಹೊರಡುತ್ತಿದ್ದೇನೆ. ಎಲ್ಲ ಕ್ಷೇತ್ರಗಳ ಬಗ್ಗೆ ವರದಿ ತರಿಸಿಕೊಂಡಿದ್ದು, ಎಲ್ಲವೂ ಸಕಾರಾತ್ಮಕವಾಗಿದೆ, ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದರು.

ನಿನ್ನೆ ಈ ಕ್ಷೇತ್ರದಲ್ಲಿ ಸಿಕ್ಕಿದ ಜನಬೆಂಬಲ ನೋಡಿ ಆಶ್ಚರ್ಯ ಆಗಿದೆ. ಮಳೆಯ ನಡುವೆಯೂ ಜನ ಸೇರಿದ್ದು ಬಿಜೆಪಿಯನ್ನು ಬೆಂಬಲಿಸುವ ಸೂಚನೆ ನೀಡಿದೆ. ಎಲ್ಲ ಸಮುದಾಯದ ಮುಖಂಡರ ಜೊತೆ ಚರ್ಚೆ ಮಾಡಿದ್ದು ಇವೆಲ್ಲವನ್ನು ನೋಡುವಾಗ ಬಿಜೆಪಿ ಅಭ್ಯರ್ಥಿ 25 ಸಾವಿರ ಮತಗಳ ಅಂತರದಿಂದ ಗೆಲ್ಲುವ ಸಾಧ್ಯತೆ ಇದೆ ಎಂದರು.

'ಈ ಸರ್ಕಾರ ಪೂರ್ಣಾವಧಿವರೆಗೆ ನಡೆಯಬೇಕಾದರೆ ನನ್ನ ವೀರಶೈವ-ಲಿಂಗಾಯತ ಸಮುದಾಯದವರ ಒಂದೂ ಮತ ಬೇರೆ ಪಕ್ಷಗಳಿಗೆ ಹೋಗಬಾರದು. ಯಾವುದೇ ವ್ಯಾಮೋಹಕ್ಕೆ ಬಲಿಯಾಗದೇ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕು. ರಮೇಶ್ ಜಾರಕಿಹೊಳಿ ಅವರು 16 ಜನ ಅನರ್ಹ ಶಾಸಕರನ್ನು ಕಟ್ಟಿಕೊಂಡು ಹೋರಾಟ ಮಾಡದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಜಗದೀಶ್ ಶೆಟ್ಟರ್, ಶಶಿಕಲಾ ಜೊಲ್ಲೆ ಅವರು ವಿಧಾನಸೌಧದ 3ನೇ ಮಹಡಿಯಲ್ಲಿ ಕೂರಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ನಾವು ಜೀವನ ಪರ್ಯಂತ ಮರೆಯಲು ಸಾಧ್ಯವಿಲ್ಲ. ಅವರನ್ನು ಗೆಲ್ಲಿಸುವ ಮೂಲಕ ಋಣ ತೀರಿಸಬೇಕಾಗಿದೆ ಎಂದು ಹೇಳಿದರು.

ಅಂತೆಯೇ ನನ್ನ ವೀರಶೈವ-ಲಿಂಗಾಯತ ಸಮುದಾಯದವರ ಒಂದೂ ಮತ ಬೇರೆ ಪಕ್ಷಗಳಿಗೆ ಹೋಗಬಾರದು ಎಂದು ಹೇಳಿರುವ ಯಡಿಯೂರಪ್ಪ ಒಂದು ಸಮುದಾಯದ ಓಲೈಕೆ ಮಾಡಿದ್ದಾರೆ ಎಂದು ಪ್ರತಿಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು. ದೂರಿನ ಅನ್ವಯ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಎಫ್‌ಐಆರ್ ದಾಖಲು ಮಾಡಲಾಗಿದೆ.

ಗೋಕಾಕ್ ಸೇರಿದಂತೆ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಡಿಸೆಂಬರ್ 5ರಂದು ಉಪ ಚುನಾವಣೆ ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT