ಕೆಸಿ ರಾಮಮೂರ್ತಿ 
ರಾಜಕೀಯ

ರಾಜ್ಯಸಭಾ ಸದಸ್ಯರಾಗಿ ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವಿರೋಧ ಆಯ್ಕೆ

ಇತ್ತೀಚೆಗಷ್ಟೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಕೆ.ಸಿ.ರಾಮ ಮೂರ್ತಿ ಅವರು ಗುರುವಾರ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರು: ಇತ್ತೀಚೆಗಷ್ಟೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಕೆ.ಸಿ.ರಾಮ ಮೂರ್ತಿ ಅವರು ಗುರುವಾರ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಇದೊಂದು ಅಪರೂಪದ ಘಟನೆಯಾಗಿದೆ. ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ಕೆ.ಸಿ. ರಾಮಮೂರ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಮತ್ತೆ ಅದೇ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪುನರಾಯ್ಕೆಯಾಗಿದ್ದಾರೆ.

ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷ್ಮಿ ಅವಿರೋಧ ಆಯ್ಕೆಯನ್ನು ಘೋಷಿಸಿ, ಪ್ರಮಾಣ ಪತ್ರ ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಎಸ್.ಆರ್.ವಿಶ್ವನಾಥ್, ರಾಜ್ಯ ಬಿಜೆಪಿ ಸಂಚಾಲಕ ಎ.ಎಚ್.ಆನಂದ್ ಅವರು ಉಪಸ್ಥಿತರಿದ್ದು, ರಾಮಮೂರ್ತಿ ಅವರನ್ನು ಅಭಿನಂದಿಸಿದರು.

ರಾಜ್ಯಸಭೆ ಉಪ ಚುನಾವಣೆಗೆ ಇಬ್ಬರು ಪಕ್ಷೇತರ ‌ಅಭ್ಯರ್ಥಿಗಳ‌ು ನಾಮಪತ್ರ ಸಲ್ಲಿಸಿದ್ದರು. ಆದರೆ ಅವು ತಿರಸ್ಕೃತವಾಗಿದ್ದವು. ಬೇರೆ ಯಾವುದೇ ರಾಜಕೀಯ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿರಲಿಲ್ಲ.

ಅಭ್ಯರ್ಥಿಗಳ ನಾಮಪತ್ರಕ್ಕೆ 10 ಮಂದಿ ಅನುಮೋದಕರ ಸಹಿ ಹಾಕುವುದು ಕಡ್ಡಾಯವಾಗಿದೆ. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಿಗೆ ಯಾರೂ ಅನುಮೋದಕರು ಸಹಿ ಹಾಕಿರಲಿಲ್ಲ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಪರ 10 ಶಾಸಕರು ಅನುಮೋದಕರಾಗಿ ಸಹಿ ಹಾಕಿದ್ದರು. 

ಕೆ.ಸಿ.ರಾಮಮೂರ್ತಿ ಅವರನ್ನು ಕಾಂಗ್ರೆಸ್​ 2016ರಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆ ಮಾಡಿತ್ತು. ಇದೀಗ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ಎರಡನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT