ಮೂರು ಪಕ್ಷಗಳ ನಾಯಕರು 
ರಾಜಕೀಯ

ಉಪ ಚುನಾವಣೆ: ಮತದಾನೋತ್ತರ ಸಮೀಕ್ಷೆಯಲ್ಲಿ ಬಿಎಸ್ ವೈ ಸರ್ಕಾರ ಸೇಫ್, ಕಾಂಗ್ರೆಸ್-ಜೆಡಿಎಸ್ ಮರು ಮೈತ್ರಿ ಕನಸು ಭಗ್ನ

ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಗುರುವಾರ ಮತದಾನ ನಡೆದಿದ್ದು, ಡಿಸೆಂಬರ್ 9ರಂದು ಫ‌ಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು: ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಗುರುವಾರ ಮತದಾನ ನಡೆದಿದ್ದು, ಡಿಸೆಂಬರ್ 9ರಂದು ಫ‌ಲಿತಾಂಶ ಪ್ರಕಟವಾಗಲಿದೆ.

ಇಂದು ಸಂಜೆ ಮತದಾನ ಮುಕ್ತಾಯವಾದ ಬೆನ್ನಲ್ಲೇ ಸಿವೋಟರ್ ನಡೆಸಿದ ಮತದಾನೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಮತದಾರ ಬಿಎಸ್ ವೈ ಸರ್ಕಾರವನ್ನು ಸೇಫ್ ಮಾಡುವ ಮೂಲಕ ಕಾಂಗ್ರೆಸ್ - ಜೆಡಿಎಸ್ ಮರು ಮೈತ್ರಿ ಕನಸು ಭಗ್ನಗೊಳಿಸಿದ್ದಾರೆ.

ಸಿವೋಟರ್ ಸಮೀಕ್ಷೆ ಪ್ರಕಾರ ಬಿಜೆಪಿಗೆ 9ರಿಂದ 12, ಕಾಂಗ್ರೆಸ್‌ಗೆ 3ರಿಂದ 6 ಮತ್ತು ಜೆಡಿಎಸ್ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಲಿದೆ.

ಕ್ಷೇತ್ರವಾರು ಫಲಿತಾಂಶ
ಮಹಾಲಕ್ಷ್ಮೀ ಲೇಔಟ್‌ನಲ್ಲಿ ಗೋಪಾಲಯ್ಯ (ಬಿಜೆಪಿ) 
ಕೆ.ಆರ್.ಪುರಂ –ಭೈರತಿ ಬಸವರಾಜ್ (ಬಿಜೆಪಿ)
ಗೋಕಾಕ– ರಮೇಶ್ ಜಾರಕಿಹೊಳಿ (ಬಿಜೆಪಿ) 
ಅಥಣಿ– ಮಹೇಶ್ ಕುಮಠಳ್ಳಿ (ಬಿಜೆಪಿ)
ಹಿರೇಕೆರೂರು– ಬಿ.ಸಿ.ಪಾಟೀಲ್ (ಬಿಜೆಪಿ)
ಯಲ್ಲಾಪುರ– ಶಿವರಾಮ ಹೆಬ್ಬಾರ್ (ಬಿಜೆಪಿ)
ಯಶವಂತಪುರ– ಎಸ್ ಟಿ ಸೋಮಶೇಖರ್ (ಬಿಜೆಪಿ)
ವಿಜಯನಗರ– ಆನಂದ್‌ಸಿಂಗ್ (ಬಿಜೆಪಿ)
ಹೊಸಕೋಟೆ– ಎಂಟಿಬಿ ನಾಗರಾಜ್ (ಬಿಜೆಪಿ)
ಚಿಕ್ಕಬಳ್ಳಾಪುರ – ಡಾ. ಕೆ. ಸುಧಾಕರ್‌ (ಬಿಜೆಪಿ) ಮತ್ತು ಎಂ. ಆಂಜಿನಪ್ಪ (ಕಾಂಗ್ರೆಸ್‌) ನಡುವೆ ನೇರಾ ನೇರಾ ಹೋರಾಟ
ಕಾಗವಾಡ - ರಾಜು ಕಾಗೆ (ಕಾಂಗ್ರೆಸ್‌)
ಕೆಆರ್‌ ಪೇಟೆ - ಕೆಸಿ ನಾರಾಯಣ ಗೌಡ (ಬಿಜೆಪಿ) ಮತ್ತು ಬಿಎಲ್‌ ದೇವರಾಜ್‌ (ಜೆಡಿಎಸ್‌) ನಡುವೆ ಸಮಬಲದ ಸ್ಪರ್ಧೆ
ಶಿವಾಜಿನಗರ - ರಿಜ್ವಾನ್‌ ಅರ್ಷದ್‌ (ಕಾಂಗ್ರೆಸ್‌) ಮತ್ತು ಎಂ. ಸರವಣ (ಬಿಜೆಪಿ) ನಡುವೆ ಜಿದ್ದಾ ಜಿದ್ದಿಯ ಫೈಟ್‌
ರಾಣೇಬೆನ್ನೂರು - ಕೆ.ಬಿ. ಕೋಳಿವಾಡ್‌ (ಕಾಂಗ್ರೆಸ್‌) ಮತ್ತು ಅರುಣ್‌ ಕುಮಾರ್‌ ಪೂಜಾರ (ಬಿಜೆಪಿ) ನಡುವೆ ತುರುಸಿನ ಸ್ಪರ್ಧೆ
ಹುಣಸೂರು - ಎಚ್‌ಪಿ ಮಂಜುನಾಥ್‌ (ಕಾಂಗ್ರೆಸ್‌)

ಸಂಜೆ 4 ಗಂಟೆ ವರೆಗೆ ಸಿ-ವೋಟರ್​ ನಡೆಸಿದ ಸಮೀಕ್ಷೆಯ ಫಲಿತಾಂಶ ಇದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT