ಸಾಂದರ್ಭಿಕ ಚಿತ್ರ 
ರಾಜಕೀಯ

ಬಿಜೆಪಿಗೆ ಮೇಲುಗೈ: ಎಕ್ಸಿಟ್ ಪೋಲ್ ವರದಿಯಿಂದ ಕಮಲ ಪಾಳಯದಲ್ಲಿ'ಕಿಲಕಿಲ' 

ಗುರುವಾರ ನಡೆದ 15  ವಿದಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆದಿದೆ, ಶೇ.66.4 ರಷ್ಟು ಪ್ರಮಾಣದಲ್ಲಿ ಮತದಾನವಾಗಿದೆ.

ಬೆಂಗಳೂರು: ಗುರುವಾರ ನಡೆದ 15  ವಿದಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆದಿದೆ, ಶೇ.66.4 ರಷ್ಟು ಪ್ರಮಾಣದಲ್ಲಿ ಮತದಾನವಾಗಿದೆ.

ಅತಿ ಹೆಚ್ಚು ಮತದಾರರಿರುವ ಕ್ಷೇತ್ರಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ, ಸದ್ಯ ಎಲ್ಲರ ಚಿತ್ತ ಸೋಮವಾರದ ಮತಎಣಿಕೆ ಕಾರ್ಯದ ಮೇಲೆ ನಿಂತಿದೆ.  ಚುನವಾಣೋತ್ತರ ಸಮೀಕ್ಷೆ ಬಿಜೆಪಿ ಪರ ಇರುವುದರಿಂದ ಸದ್ಯಕ್ಕೆ ಬಿಎಸ್ ವೈ ಸರ್ಕಾರ ಸೇಫ್ ಆಗಿದೆ ಎಂದು ಹೇಳಲಾಗುತ್ತಿದೆ. 

ಸರ ಳ ಬಹುಮತಕ್ಕೆ ಬಿಜೆಪಿಗೆ ಕನಿಷ್ಠ ಆರು ಸೀಟುಗಳನ್ನು ಗೆಲ್ಲಬೇಕಿದೆ, ಆದರೆ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ 8ರಿಂದ 12 ಸೀಟು ಗೆಲ್ಲಲಿದೆ ಎಂದು ಹೇಳಲಾಗುತ್ತಿದೆ.  ಸಿ ವೋಟರ್ ಸಮೀಕ್ಷೆ ಪ್ರಕಾರ ಬಿಜೆಪಿ 10-12 ಕಾಂಗ್ರೆಸ್ 2 ಹಾಗೂ ಜೆಡಿಎಸ್ 1 ಕ್ಷೇತ್ರದಲ್ಲಿ ಗೆಲ್ಲುವ ಸಾಧ್ಯತೆಯಿದೆ ಎಂದು  ಹೇಳಲಾಗಿದೆ. 

ಇನ್ನೂ ಮೂರು ಪ್ರಾದೇಶಿಕ ಚಾನೆಲ್ ಗಳು ಕೈಗೊಂಡ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಸಿಗಲಿದೆ ಎಂದು ಹೇಳಲಾಗುತ್ತಿದೆ.  ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ಮುಖಂಡರು 15 ಕ್ಷೇತ್ರಗಳಲ್ಲಿಯೂ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ,  ಕಾಂಗ್ರೆಸ್ 7 ಸೀಟು ಹಾಗೂ ಜೆಡಿಎಸ್ ಎರಡರಿಂದ ಮೂರು ಸೀಟು ಗೆಲ್ಲುವ ವಿಶ್ವಾಸದಲ್ಲಿದೆ.

ಸಂಜೆ 4 ಗಂಟೆವರೆಗೂ ನಡೆ ಮತದಾನ ಪ್ರಕ್ರಿಯೆ ಆಧರಿಸಿ  ಎಕ್ಸಿಟ್ ಪೋಲ್ ವರದಿ ತಯಾರಾಗಿದೆ, ಸಂಜೆ 6 ಗಂಟೆ ಸುಮಾರಿಗೆ ಮತದಾನ ಪ್ರಕ್ರಿಯೆ ತೀವ್ರವಾಯಿತು.  ಹೆಚ್ಚಿನ ಪ್ರಮಾಣದ ಮತದಾನವಾಗುವುದರಿಂದ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ,  ಕಾಂಗ್ರೆಸ್ ಮತ ಬ್ಯಾಂಕ್ ಆಗಿರುವ ಶಿವಾಜಿನಗರದಲ್ಲಿ ಅತಿ ಹೆಚ್ಚು ಮತದಾನವಾಗಿದೆ,  ಆದರೆ ಶೇಕಡಾವರು ಪ್ರಮಾಣದಲ್ಲಿ ಕಡಿಮೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT