ಸಾಂದರ್ಭಿಕ ಚಿತ್ರ 
ರಾಜಕೀಯ

ಬಿಜೆಪಿಗೆ ಮೇಲುಗೈ: ಎಕ್ಸಿಟ್ ಪೋಲ್ ವರದಿಯಿಂದ ಕಮಲ ಪಾಳಯದಲ್ಲಿ'ಕಿಲಕಿಲ' 

ಗುರುವಾರ ನಡೆದ 15  ವಿದಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆದಿದೆ, ಶೇ.66.4 ರಷ್ಟು ಪ್ರಮಾಣದಲ್ಲಿ ಮತದಾನವಾಗಿದೆ.

ಬೆಂಗಳೂರು: ಗುರುವಾರ ನಡೆದ 15  ವಿದಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆದಿದೆ, ಶೇ.66.4 ರಷ್ಟು ಪ್ರಮಾಣದಲ್ಲಿ ಮತದಾನವಾಗಿದೆ.

ಅತಿ ಹೆಚ್ಚು ಮತದಾರರಿರುವ ಕ್ಷೇತ್ರಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ, ಸದ್ಯ ಎಲ್ಲರ ಚಿತ್ತ ಸೋಮವಾರದ ಮತಎಣಿಕೆ ಕಾರ್ಯದ ಮೇಲೆ ನಿಂತಿದೆ.  ಚುನವಾಣೋತ್ತರ ಸಮೀಕ್ಷೆ ಬಿಜೆಪಿ ಪರ ಇರುವುದರಿಂದ ಸದ್ಯಕ್ಕೆ ಬಿಎಸ್ ವೈ ಸರ್ಕಾರ ಸೇಫ್ ಆಗಿದೆ ಎಂದು ಹೇಳಲಾಗುತ್ತಿದೆ. 

ಸರ ಳ ಬಹುಮತಕ್ಕೆ ಬಿಜೆಪಿಗೆ ಕನಿಷ್ಠ ಆರು ಸೀಟುಗಳನ್ನು ಗೆಲ್ಲಬೇಕಿದೆ, ಆದರೆ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ 8ರಿಂದ 12 ಸೀಟು ಗೆಲ್ಲಲಿದೆ ಎಂದು ಹೇಳಲಾಗುತ್ತಿದೆ.  ಸಿ ವೋಟರ್ ಸಮೀಕ್ಷೆ ಪ್ರಕಾರ ಬಿಜೆಪಿ 10-12 ಕಾಂಗ್ರೆಸ್ 2 ಹಾಗೂ ಜೆಡಿಎಸ್ 1 ಕ್ಷೇತ್ರದಲ್ಲಿ ಗೆಲ್ಲುವ ಸಾಧ್ಯತೆಯಿದೆ ಎಂದು  ಹೇಳಲಾಗಿದೆ. 

ಇನ್ನೂ ಮೂರು ಪ್ರಾದೇಶಿಕ ಚಾನೆಲ್ ಗಳು ಕೈಗೊಂಡ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಸಿಗಲಿದೆ ಎಂದು ಹೇಳಲಾಗುತ್ತಿದೆ.  ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ಮುಖಂಡರು 15 ಕ್ಷೇತ್ರಗಳಲ್ಲಿಯೂ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ,  ಕಾಂಗ್ರೆಸ್ 7 ಸೀಟು ಹಾಗೂ ಜೆಡಿಎಸ್ ಎರಡರಿಂದ ಮೂರು ಸೀಟು ಗೆಲ್ಲುವ ವಿಶ್ವಾಸದಲ್ಲಿದೆ.

ಸಂಜೆ 4 ಗಂಟೆವರೆಗೂ ನಡೆ ಮತದಾನ ಪ್ರಕ್ರಿಯೆ ಆಧರಿಸಿ  ಎಕ್ಸಿಟ್ ಪೋಲ್ ವರದಿ ತಯಾರಾಗಿದೆ, ಸಂಜೆ 6 ಗಂಟೆ ಸುಮಾರಿಗೆ ಮತದಾನ ಪ್ರಕ್ರಿಯೆ ತೀವ್ರವಾಯಿತು.  ಹೆಚ್ಚಿನ ಪ್ರಮಾಣದ ಮತದಾನವಾಗುವುದರಿಂದ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ,  ಕಾಂಗ್ರೆಸ್ ಮತ ಬ್ಯಾಂಕ್ ಆಗಿರುವ ಶಿವಾಜಿನಗರದಲ್ಲಿ ಅತಿ ಹೆಚ್ಚು ಮತದಾನವಾಗಿದೆ,  ಆದರೆ ಶೇಕಡಾವರು ಪ್ರಮಾಣದಲ್ಲಿ ಕಡಿಮೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT