ವಿ.ಎಸ್. ಉಗ್ರಪ್ಪ 
ರಾಜಕೀಯ

ಜಾತಿ ಆಧಾರದಲ್ಲಿ ಮತ ಕೇಳಿದ ಮಾಧುಸ್ವಾಮಿಯನ್ನು ಸಂಪುಟದಿಂದ ಕೈಬಿಡಿ-  ವಿ.ಎಸ್. ಉಗ್ರಪ್ಪ 

ಕಾನೂನು ಸಚಿವ ಜೆ.ಸಿ. ಮಾಧು ಸ್ವಾಮಿ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದಿಂದ ಕೈಬಿಡಬೇಕು ಎಂದು ಮಾಜಿ ಸಂಸದ,‌ ಕಾಂಗ್ರೆಸ್ ಮುಖಂಡ ವಿ.ಎಸ್‌.ಉಗ್ರಪ್ಪ ಒತ್ತಾಯಿಸಿದ್ದಾರೆ.

ಬೆಂಗಳೂರು: ಇತ್ತೀಚೆಗೆ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ವೀರಶೈವರ ಹೆಸರಿನಲ್ಲಿ ಮತ ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿರುವ ಕಾನೂನು ಸಚಿವ ಜೆ.ಸಿ. ಮಾಧು ಸ್ವಾಮಿ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದಿಂದ ಕೈಬಿಡಬೇಕು ಎಂದು ಮಾಜಿ ಸಂಸದ,‌ ಕಾಂಗ್ರೆಸ್ ಮುಖಂಡ ವಿ.ಎಸ್‌.ಉಗ್ರಪ್ಪ ಒತ್ತಾಯಿಸಿದ್ದಾರೆ.

ಚುನಾವಣಾ ಆಯೋಗ ನಿಜವಾಗಿಯೂ ಜೀವಂತವಾಗಿ ಇರುವುದೇ ಆಗಿದ್ದ ತಕ್ಷಣವೇ ಮಾಧುಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಆಯೋಗ ಜೀವಂತವಾಗಿರುವ ಬಗ್ಗೆ ತಮಗೆ ವಿಶ್ವಾಸವಿಲ್ಲ ಎಂದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ಸಚಿವರಾಗಿ ಮಾಧುಸ್ವಾಮಿ ಜಾತಿ ಹೆಸರಿನಲ್ಲಿ ಮತ ಕೇಳುವುದು ತಪ್ಪಲ್ಲ ಎನ್ನುತ್ತಾರೆ ಎಂದಾದರೆ ಅವರು ಸಚಿವರಾಗಿ ಮುಂದುವರೆಯಲು ಅರ್ಹರಲ್ಲ. ಜಾತಿ ಆಧಾರದ ಮೇಲೆ ಮತ ಕೇಳಿದ್ದಕ್ಕೆ ಕಾನೂನಿನ‌ ಪ್ರಕಾರ ಮೂರು ವರ್ಷ ಜೈಲು ಶಿಕ್ಷೆ ಆಗುತ್ತದೆ. ಕಾನೂನು ಸಚಿವರಿಗೆ ಕಾನೂನಿನ ಬಗ್ಗೆ ಜ್ಞಾನವೇ ಇಲ್ಲ‌ .ಕಾನೂನು ಸಚಿವರ ಕಾನೂನು ಉಲ್ಲಂಘನೆಯನ್ನು ರಾಜ್ಯಪಾಲರು  ಗಮನಿಸಿಯೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT