ರಾಜಕೀಯ

ನಾನು ಚುನಾವಣೆಯಲ್ಲಿ ಸೋತರೆ ಅದಕ್ಕೆ ಬಿಜೆಪಿ ಸಂಸದ ಬಚ್ಚೇಗೌಡ ಅವರೇ ಕಾರಣ: ಸಿಎಂಗೆ ಎಂ.ಟಿ.ಬಿ.ನಾಗರಾಜ್ ದೂರು 

Sumana Upadhyaya

ಬೆಂಗಳೂರು: ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲು ಎರಡು ದಿನ ಬಾಕಿ ಇರುವ ಬೆನ್ನಲ್ಲೇ ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ಶನಿವಾರ ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.


ನಾನು ಚುನಾವಣೆಯಲ್ಲಿ ಸೋತರೆ ಅದಕ್ಕೆ ಬಿಜೆಪಿ ಸಂಸದ ಬಚ್ಚೇಗೌಡ ಅವರೇ ಕಾರಣ. ಅವರು ಚುನಾವಣೆಯಲ್ಲಿ ತಮ್ಮ ಪರ ಪ್ರಚಾರ ಮಾಡಿಲ್ಲ. ಸಹಕಾರ ನೀಡಿಲ್ಲ ಎಂದು ಎಂಟಿಬಿ ನಾಗರಾಜ್ ಮುಖ್ಯಮಂತ್ರಿಗೆ ದೂರು ನೀಡಿದರು ಎಂದು ತಿಳಿದುಬಂದಿದೆ.


ಬಚ್ಚೇಗೌಡರು ಮಗ ಶರತ್ ಪರ ರಹಸ್ಯವಾಗಿ ಸಭೆ ನಡೆಸಿ ಬೆಂಬಲ ನೀಡಿದ್ದಾರೆ. ಅವರು ರಹಸ್ಯವಾಗಿಯೇ ತಮ್ಮ ಬೆಂಬಲಿಗರ ಮೂಲಕ ಮಗನ ಪರ ಸಂದೇಶ ರವಾನಿಸಿದ್ದಾರೆ ಎಂದು ಎಂಟಿಬಿ ದೂರು ನೀಡಿದರು. ಈ ಕುರಿತು ಒಂದಷ್ಟು ಸಾಕ್ಷಿಗಳೂ ತಮ್ಮ ಬಳಿ ಇವೆ ನಾಗರಾಜ್ ತಿಳಿಸಿದರು. ಒಂದೊಮ್ಮೆ ವ್ಯತಿರಿಕ್ತ ಫಲಿತಾಂಶ ಬಂದರೆ ತಮ್ಮನ್ನು ಕೈಬಿಡದಂತೆ ಮನವಿ ಮಾಡಿದರು ಎಂದು ತಿಳಿದುಬಂದಿದೆ.

SCROLL FOR NEXT