ಯಡಿಯೂರಪ್ಪ ಮತ್ತು ಕುಮಾರಸ್ವಾಮಿ 
ರಾಜಕೀಯ

ಮಂಡ್ಯದಲ್ಲಿ ಅರಳಿದ ಕಮಲ: ಖಾತೆ ತೆರೆಯದ ಜೆಡಿಎಸ್, ಎಂಬಿಟಿಗೆ ಮುಖಭಂಗ

ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಮಲ ಪಕ್ಷ, ಕಮಾಲ್ ಮಾಡಿದೆ. 

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಮಲ ಪಕ್ಷ, ಕಮಾಲ್ ಮಾಡಿದೆ. 

ರೈತರ ಪಕ್ಷವೆಂದು ಬಿಂಬಿಸಿಕೊಂಡಿದ್ದ ಜೆಡಿಎಸ್  ಉಪ ಚುನಾವಣೆಯ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಆದರೆ ಒಂದು ಕ್ಷೇತ್ರವನ್ನು ಜೆಡಿಎಸ್ ಗೆಲ್ಲಿಸಿಕೊಳ್ಳಲು ಸಾಧ್ಯವಾಗಿಲ್ಲ,  ಜೆಡಿಎಸ್ ಭದ್ರಕೋಟೆ ಎಂದೇ ಪರಿಗಣಿತವಾಗಿರುವ ಮಂಡ್ಯ ಜಿಲ್ಲೆಯಲ್ಲಿ  ಜೆಡಿಎಸ್ ಅಭ್ಯರ್ಥಿ ಪರಾಭವಗೊಂಡಿದ್ದಾರೆ, ಕೊನೆ ಪಕ್ಷ ಯಶವಂತಪುರದಲ್ಲಿ ಜೆಡಿಎಸ್ ಗೆಲ್ಲಬಹುದೆಂಬ ನೀರಿಕ್ಷೆ ಕೂಡ ಹುಸಿಯಾಗಿದೆ.

ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಮಂಡ್ಯದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿದೆ. ಕೆಆರ್ ಪೇಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾರಾಯಣ ಗೌಡ ಗೆಲುವು ಸಾಧಿಸಿದೆ. 

ಇನ್ನೂ ಹೊಸಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಂಟಿಬಿ ನಾಗರಾಜ್  ಅವರಿಗೆ ತೀವ್ರ ಮುಖಭಂಗವಾಗಿದೆ, ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲುವು ಸಾಧನಸಿದ್ದಾರೆ.  ಒಟ್ಟಾರೆ ಉಪ ಚುನಾವಣೆ ಫಲಿತಾಂಶದಿಂದ ಬಿಎಸ್ ಯಡಿಯೂರಪ್ಪ ಅವರ ಸರ್ಕಾರ ಸದ್ಯಕ್ಕೆ ಸೇಫ್ ಆಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT