ಮಗನಿಗೆ ಸಿಹಿ ತಿನ್ನಿಸುತ್ತಿರುವ ಮುಖ್ಯಮಂತ್ರಿಬಿಎಸ್ ವೈ 
ರಾಜಕೀಯ

ಮಂಡ್ಯ ಜಿಲ್ಲೆಯಲ್ಲಿ ಖಾತೆ ತೆರೆದ ಬಿಜೆಪಿ: ಮಗನಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ ಮುಖ್ಯಮಂತ್ರಿ ಬಿಎಸ್ ವೈ!

ಜೆಡಿಎಸ್ ಭದ್ರಕೋಟೆ ಎಂದೇ ಜನಜನಿತವಾಗಿದ್ದ ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

ಬೆಂಗಳೂರು: ಜೆಡಿಎಸ್ ಭದ್ರಕೋಟೆ ಎಂದೇ ಜನಜನಿತವಾಗಿದ್ದ ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

ಕೆ. ಆರ್. ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ , ಗೆಲುವಿನ ಸನ್ನಿಹಕ್ಕೆ ಬರುತ್ತಿದ್ದಂತೆಯೇ ಬೆಂಗಳೂರಿನ ನಿವಾಸದಲ್ಲಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರನಿಗೆ ಸಿಹಿ ತಿನ್ನಿಸಿ ಸಂಭ್ರಮ ಪಟ್ಟರು.

ಕೆ. ಆರ್. ಪೇಟೆ ಗೆಲುವಿನಲ್ಲಿ ವಿಜಯೇಂದ್ರ ಪ್ರಮುಖ ಪಾತ್ರ ವಹಿಸಿದ್ದಾರೆ.  ಈ ಕ್ಷೇತ್ರದಲ್ಲಿ ಚುನಾವಣಾ ಉಸ್ತುವಾರಿಯನ್ನು ಅವರೇ ವಹಿಸಿಕೊಂಡಿದ್ದರು. ತಮ್ಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಬಾಯಿಸುವ ಮೂಲಕ ತಾವೊಬ್ಬ ಭವಿಷ್ಯದ ಅತ್ಯುತ್ತಮ ಸಂಘಟನಗಾರ ಎಂಬುದನ್ನು ವಿಜಯೇಂದ್ರ ನಿರೂಪಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಹಾಗೂ ವಿಜಯೇಂದ್ರ ಅವರ ನೇತೃತ್ವದಲ್ಲಿ ಕೆ. ಆರ್ ಪೇಟೆಯ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮತ್ತೆ ಗೆಲುವು ಸಾಧಿಸುವಂತಾಗಿದ್ದು, ಬಿಜೆಪಿ ವಲಯದಲ್ಲಿ ಉತ್ಸಾಹ ಇಮ್ಮಡಿಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನವದೆಹಲಿ: ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ಸಂಸದರ ಸಭೆ; ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಮಂಡನೆ!

'ಕಾಕ್ರೋಚ್​' ಪಾರ್ಟಿಗೆ 1 ಕೋಟಿ ರೂ ದೇಣಿಗೆ, ಉಚಿತ ಕಾನೂನು ನೆರವು ಘೋಷಿಸಿದ ಕಪಿಲ್‌ ಸಿಬಲ್!

CJP ಪ್ರತಿಭಟನೆಯಲ್ಲಿ 2,873 ಕ್ರಿಮಿನಲ್ ಗಳು ಭಾಗಿ: ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ದೆಹಲಿ ಪೊಲೀಸರು!

ರಾಜ್ಯದ ರೇಷನ್ ಅಂಗಡಿಗಳಲ್ಲಿ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾ ಪ್ರೀಮಿಯರ್ ಶೋ ಟಿಕೆಟ್ ಮಾರಾಟ! ಜನರ ಆಕ್ರೋಶ

ತನಗಿಂತ 9 ವರ್ಷ ಕಿರಿಯನಾದ Team India ಕ್ರಿಕೆಟಿಗನ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್? ಸಿಕ್ಕಿಬಿದ್ದ ನಟಿ, Video!