ಹೆಚ್. ವಿಶ್ವನಾಥ್, ಎಂಟಿಬಿ ನಾಗರಾಜ್ 
ರಾಜಕೀಯ

ಉಪ ಚುನಾವಣೆಯಲ್ಲಿ ಸೋತವರಿಗೂ ಸಚಿವ ಸ್ಥಾನ ದೊರಕಲಿದೆಯೇ?

ಚುನಾವಣೆಯಲ್ಲಿ  ಸೋತವರಿಗೂ ಸಚಿವ ಸ್ಥಾನ ದೊರಕಲಿಯೇ ಎಂಬುದು ಬಿಜೆಪಿ ಪಾಲಿಗೆ ಬಿಸಿತುಪ್ಪವಾಗುವ ಸಾಧ್ಯತೆ ಇದೆ. ಬಿಜೆಪಿ ಸರಕಾರ ಬರಲು ಕಾರಣಿಬೂತರಾದ ವಿಶ್ವನಾಥ್  ಮತ್ತು ಎಂಟಿಬಿ ನಾಗರಾಜ್  ಅವರಿಗೆ ಸಚಿವ ಸ್ಥಾನ  ದೊರಕಲಿಯೇ? ಎಂಬುದು ಬಿಸಿ ಬಿಸಿ ಚರ್ಚೆಗೆ ಗ್ರಾಸ ಒದಗಿಸಿದೆ

ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ  ಮತ ಎಣಿಕೆ ಪ್ರಗತಿಯಲಿದ್ದು ಬಿಜೆಪಿ 12 ಸ್ಥಾನ   ಪಡೆಯುವುದು ಬಹುತೇಕ ಖಾತ್ರಿಯಾದಂತಿದ್ದು, ಈ ಮೂಲಕ ಸರಕಾರ  ಮತ್ತು ನಾಯಕತ್ವ ವಹಿಸಿರುವ ಸಿಎಂ  ಯಡಿಯೂರಪ್ಪ  ರಾಜಕೀಯವಾಗಿ  ಮತ್ತಷ್ಟು ಶಕ್ತಿಶಾಲಿಯಾಗಲಿದ್ದಾರೆ. ಆದರೆ ಚುನಾವಣೆಯಲ್ಲಿ  ಸೋತವರಿಗೂ ಸಚಿವ ಸ್ಥಾನ ದೊರಕಲಿಯೇ ಎಂಬುದು ಬಿಜೆಪಿ ಪಾಲಿಗೆ ಬಿಸಿತುಪ್ಪವಾಗುವ ಸಾಧ್ಯತೆ ಇದೆ. 

ಬಿಜೆಪಿ ಸರಕಾರ ಬರಲು ಕಾರಣಿಬೂತರಾದ ವಿಶ್ವನಾಥ್  ಮತ್ತು ಎಂಟಿಬಿ ನಾಗರಾಜ್  ಅವರಿಗೆ ಸಚಿವ ಸ್ಥಾನ  ದೊರಕಲಿಯೇ? ಎಂಬುದು ಬಿಸಿ ಬಿಸಿ ಚರ್ಚೆಗೆ ಗ್ರಾಸ ಒದಗಿಸಿದೆ. ಇದಕ್ಕೆ ತುಪ್ಪ  ಸುರಿದಂತೆ  ಸೋತವರಿಗೆ ಯಾವುದೇ   ಸಚಿವ ಸ್ಥಾನವಿಲ್ಲ ಎಂದು  ಸಚಿವ ಈಶ್ವರಪ್ಪ ಹೇಳಿದ್ದರು .

ಬಿಜೆಪಿ ಸರ್ಕಾರ ರಚನೆ ಹಿಂದೆ ಬಿಜೆಪಿ ಅಭ್ಯರ್ಥಿಗಳಾದ ಹೆಚ್. ವಿಶ್ವನಾಥ್ ಹಾಗೂ ಎಂಬಿಬಿ ನಾಗರಾಜ್ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಆದರೆ,  ಉಪ ಚುನಾವಣೆಯಲ್ಲಿ ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ಸೋಲುವ ಮೂಲಕ ಮುಖ ಭಂಗ ಅನುಭವಿಸಿದ್ದಾರೆ. ಇವರ ಭವಿಷ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತಲೆನೋವಾಗುವ ಸಾಧ್ಯತೆ ಇದೆ.

ಚುನಾವಣೆ ಸೋತವರಿಗೂ ಕೂಡಾ ಸಂಪುಟಕ್ಕೆ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಹಿಂದೆ ಹೇಳಿಕೆ ನೀಡಿದ್ದರು. ಈಗ ಸರ್ಕಾರ ಸೇಫ್ ಆಗಿರುವುದರಿಂದ ಸೋತ ಅಭ್ಯರ್ಥಿಗಳನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವ ಮೂಲಕ ಸಂಪುಟಕ್ಕೆ ಸೇರಿಸಿಕೊಳ್ಳಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT