ಹೆಚ್. ವಿಶ್ವನಾಥ್, ಎಂಟಿಬಿ ನಾಗರಾಜ್ 
ರಾಜಕೀಯ

ಉಪ ಚುನಾವಣೆಯಲ್ಲಿ ಸೋತವರಿಗೂ ಸಚಿವ ಸ್ಥಾನ ದೊರಕಲಿದೆಯೇ?

ಚುನಾವಣೆಯಲ್ಲಿ  ಸೋತವರಿಗೂ ಸಚಿವ ಸ್ಥಾನ ದೊರಕಲಿಯೇ ಎಂಬುದು ಬಿಜೆಪಿ ಪಾಲಿಗೆ ಬಿಸಿತುಪ್ಪವಾಗುವ ಸಾಧ್ಯತೆ ಇದೆ. ಬಿಜೆಪಿ ಸರಕಾರ ಬರಲು ಕಾರಣಿಬೂತರಾದ ವಿಶ್ವನಾಥ್  ಮತ್ತು ಎಂಟಿಬಿ ನಾಗರಾಜ್  ಅವರಿಗೆ ಸಚಿವ ಸ್ಥಾನ  ದೊರಕಲಿಯೇ? ಎಂಬುದು ಬಿಸಿ ಬಿಸಿ ಚರ್ಚೆಗೆ ಗ್ರಾಸ ಒದಗಿಸಿದೆ

ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ  ಮತ ಎಣಿಕೆ ಪ್ರಗತಿಯಲಿದ್ದು ಬಿಜೆಪಿ 12 ಸ್ಥಾನ   ಪಡೆಯುವುದು ಬಹುತೇಕ ಖಾತ್ರಿಯಾದಂತಿದ್ದು, ಈ ಮೂಲಕ ಸರಕಾರ  ಮತ್ತು ನಾಯಕತ್ವ ವಹಿಸಿರುವ ಸಿಎಂ  ಯಡಿಯೂರಪ್ಪ  ರಾಜಕೀಯವಾಗಿ  ಮತ್ತಷ್ಟು ಶಕ್ತಿಶಾಲಿಯಾಗಲಿದ್ದಾರೆ. ಆದರೆ ಚುನಾವಣೆಯಲ್ಲಿ  ಸೋತವರಿಗೂ ಸಚಿವ ಸ್ಥಾನ ದೊರಕಲಿಯೇ ಎಂಬುದು ಬಿಜೆಪಿ ಪಾಲಿಗೆ ಬಿಸಿತುಪ್ಪವಾಗುವ ಸಾಧ್ಯತೆ ಇದೆ. 

ಬಿಜೆಪಿ ಸರಕಾರ ಬರಲು ಕಾರಣಿಬೂತರಾದ ವಿಶ್ವನಾಥ್  ಮತ್ತು ಎಂಟಿಬಿ ನಾಗರಾಜ್  ಅವರಿಗೆ ಸಚಿವ ಸ್ಥಾನ  ದೊರಕಲಿಯೇ? ಎಂಬುದು ಬಿಸಿ ಬಿಸಿ ಚರ್ಚೆಗೆ ಗ್ರಾಸ ಒದಗಿಸಿದೆ. ಇದಕ್ಕೆ ತುಪ್ಪ  ಸುರಿದಂತೆ  ಸೋತವರಿಗೆ ಯಾವುದೇ   ಸಚಿವ ಸ್ಥಾನವಿಲ್ಲ ಎಂದು  ಸಚಿವ ಈಶ್ವರಪ್ಪ ಹೇಳಿದ್ದರು .

ಬಿಜೆಪಿ ಸರ್ಕಾರ ರಚನೆ ಹಿಂದೆ ಬಿಜೆಪಿ ಅಭ್ಯರ್ಥಿಗಳಾದ ಹೆಚ್. ವಿಶ್ವನಾಥ್ ಹಾಗೂ ಎಂಬಿಬಿ ನಾಗರಾಜ್ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಆದರೆ,  ಉಪ ಚುನಾವಣೆಯಲ್ಲಿ ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ಸೋಲುವ ಮೂಲಕ ಮುಖ ಭಂಗ ಅನುಭವಿಸಿದ್ದಾರೆ. ಇವರ ಭವಿಷ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತಲೆನೋವಾಗುವ ಸಾಧ್ಯತೆ ಇದೆ.

ಚುನಾವಣೆ ಸೋತವರಿಗೂ ಕೂಡಾ ಸಂಪುಟಕ್ಕೆ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಹಿಂದೆ ಹೇಳಿಕೆ ನೀಡಿದ್ದರು. ಈಗ ಸರ್ಕಾರ ಸೇಫ್ ಆಗಿರುವುದರಿಂದ ಸೋತ ಅಭ್ಯರ್ಥಿಗಳನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವ ಮೂಲಕ ಸಂಪುಟಕ್ಕೆ ಸೇರಿಸಿಕೊಳ್ಳಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!