ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಅಸಹ್ಯ ಸರ್ಕಾರಕ್ಕೆ ಮತದಾರರ ಮುದ್ರೆ: ಕುಮಾರಸ್ವಾಮಿ ಬೇಸರ

ಉಪಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಜೆಡಿಎಸ್ ಶಾಸಕಾಂಗ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಇದೊಂದು ಅಸಹ್ಯ ಸರ್ಕಾರಕ್ಕೆ ಮುದ್ರೆ ಒತ್ತಿರುವ ಮತದಾರರಿಗೆ ಮನದಾಳದ...

ಬೆಂಗಳೂರು: ಉಪಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಜೆಡಿಎಸ್ ಶಾಸಕಾಂಗ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಇದೊಂದು ಅಸಹ್ಯ ಸರ್ಕಾರಕ್ಕೆ ಮುದ್ರೆ ಒತ್ತಿರುವ ಮತದಾರರಿಗೆ ಮನದಾಳದ ಅಭಿನಂದನೆಗಳು ಎಂದು ಲೇವಡಿ ಮಾಡಿದ್ದಾರೆ.

ಇದೊಂದು  "ಅಸಹ್ಯ" ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದರು. ಅವರ ಮಾತಿಗೆ  ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು 'ಪವಿತ್ರ'  ಮತ್ತು 'ಸುಭದ್ರ' ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು ಎಂದರು.

ಕುರುಡು ಕಾಂಚಾಣ ಕುಣಿಯುತಲಿತ್ತು. ಕಾಲಿಗೆ ಬಿದ್ದವರ ತುಳಿಯುತಲಿತ್ತು ಎಂದು ಹಾಡನ್ನು ಉಲ್ಲೇಖಿಸುವ ಮೂಲಕ ಮತದಾರರ‌ ಮೇಲಿನ ಬಿಜೆಪಿಯ ಹಣದ ಪ್ರಭಾವೇ ಗೆಲುವಿಗೆ ಕಾರಣ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಯಾರು ಸಹ್ಯ, ಯಾರು ಅಸಹ್ಯ ಎಂಬುದನ್ನು ಪ್ರಜ್ಞಾವಂತ ಮತದಾರರು ನಿರ್ಧರಿಸಿದ್ದಾರೆ ಎಂದು ಹೇಳುವ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಅವರು ಎಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಅಸಹ್ಯ ಸರ್ಕಾರಕ್ಕೆ ಮತದಾರರು ಬೆಂಬಲಿಸಿದ್ದಾರೆಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಕ್ಕೆ‌ ಟ್ವೀಟ್ ಮೂಲಕವೇ ಉತ್ತರ ನೀಡಿರುವ ಶ್ರೀರಾಮುಲು, ರಾಜಕೀಯ ಹೋರಾಟದಲ್ಲಿ ಸೋಲು, ಗೆಲುವು ಸಾಮಾನ್ಯ. ಸೋಲನ್ನು ಗೆಲುವಿನ ಮೆಟ್ಟಿಲಾಗಿ ಬಳಸಿಕೊಳ್ಳುವುದೇ ನಿಜವಾದ ರಾಜಕಾರಣಿಯ ಗುಣ. ಅದನ್ನು ಬಿಟ್ಟು ಜನರ ತೀರ್ಪಿನ ಬಗ್ಗೆ ವ್ಯಂಗ್ಯದ ಟೀಕೆಗಳು ವ್ಯಕ್ತಿಯ ಮನಸ್ಥಿತಿಯನ್ನು ಹೇಳುತ್ತದೆ. ಸೋಲನ್ನು ಒಪ್ಪಿಕೊಂಡು ಜನರನ್ನು ಗೌರವಿಸುವ ಗುಣ ಬರುವವರೆಗೆ ಗೆಲುವಿನ ರುಚಿ ನೋಡಲು ಸಾಧ್ಯವಿಲ್ಲ‌ ಎನ್ನುವ ಮೂಲಕ ಜೆಡಿಎಸ್‌ ನಾಯಕರಿಗೆ ತಕ್ಕ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

SCROLL FOR NEXT