ಯಡಿಯೂರಪ್ಪ 
ರಾಜಕೀಯ

ಉತ್ತರ ಕರ್ನಾಟಕದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್: ಬಿಎಸ್ ವೈ ಗೆ ವರವಾಯ್ತು ಲಿಂಗಾಯತ ಟ್ರಂಪ್ ಕಾರ್ಡ್!

ಉತ್ತರ ಕರ್ನಾಟಕದ ಐದು ಕ್ಷೇತ್ರಗಳಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ, ಗೋಕಾಕ್, ಅಥಣಿ, ರಾಣೆ ಬೆನ್ನೂರು, ಕಾಗವಾಡ ಮತ್ತು ಹಿರೆಕೆರೂರು ಐದು ಕ್ಷೇತ್ರಗಳು ಬಿಜೆಪಿ ಪಾಲಾಗಿವೆ. 

ಬೆಳಗಾವಿ: ಉತ್ತರ ಕರ್ನಾಟಕದ ಐದು ಕ್ಷೇತ್ರಗಳಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ, ಗೋಕಾಕ್, ಅಥಣಿ, ರಾಣೆ ಬೆನ್ನೂರು, ಕಾಗವಾಡ ಮತ್ತು ಹಿರೆಕೆರೂರು ಐದು ಕ್ಷೇತ್ರಗಳು ಬಿಜೆಪಿ ಪಾಲಾಗಿವೆ. 

ಲಿಂಗಾಯತರೇ ಅತಿ ಹೆಚ್ಚು ಪ್ರಮಾಣದಲ್ಲಿರುವ  ಈ ಭಾಗದಲ್ಲಿ  ಸಿಎಂ ಯಡಿಯೂರಪ್ಪ ಅವರು ರ್ಯಾಲಿ ನಡೆಸಿದ್ದರು.  ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಲಿಂಗಾಯತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ. ಇಲ್ಲಿನ ಲಿಂಗಾಯತರು ಮಾಸ್ ಲೀಡರ್ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ.

ಅಥಣಿ, ಕಾಗವಾಡ ಮತ್ತು ಗೋಕಾಕ್ ನಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿತ್ತು.  ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ ಮನ್ನಣೆ ನೀಡಿಲ್ಲ,  ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ 39,989 ಮತಗಳು ಹಾಗೂ ಶ್ರೀಮಂತ್ ಪಾಟೀಲ್ 18,532 , ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ 29,006 ಹಾಗೂ ಯಲ್ಲಾಪುರದಲ್ಲಿ ಶಿವರಾಮ್ ಹೆಬ್ಬಾರ್ 31,408 , ಬಿಸಿ ಪಾಟೀಲ್ 29,067  ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಕಾಗವಾಡ ಮತ್ತು ಅಥಣಿಯ ಕೆಲ ಭಾಗಗಳಲ್ಲಿ  ಪ್ರವಾಹ ಪರಿಹಾರ ಸಂಬಂಧಿಸಿದಂತೆ ಶ್ರೀಮಂತ್ ಪಾಟೀಲ್ ಮತ್ತು ಮಹೇಶ್ ಕುಮಟಳ್ಳಿ ಅವರು ತಮ್ಮ ಗ್ರಾಮಗಳಿಗೆ ಬರದಂತೆ ವಿರೋಧ ವ್ಯಕ್ತ ಪಡಿಸಿದ್ದರು. 

ಆದರೆ ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಈ 5 ಕ್ಷೇತ್ರಗಳಲ್ಲಿ ನಿರಂತರ ಪ್ರಚಾರ ನಡೆಸಿದರು, ಲಿಂಗಾಯತರು ಹಾಗೂ ವೀರಶೈವರು ತಮ್ಮನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. ಸಿಎಂ ನಿರ್ಧಾರದಂತೆ  ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಗೋಕಾಕ್ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಗೆ ಅಥಣಿ ಮತ್ತು ಕಾಗವಾಡ ಉಸ್ತುವಾರಿ ನೀಡಿದರು.  ಇಬ್ಬರು ಹಿರಿಯ ನಾಯಕರ ಚುನಾವಣೆ ತಂತ್ರಗಾರಿಕೆ ಉತ್ತಮ ರೀತಿಯಲ್ಲಿ ಫಲ ನೀಡಿತು.

ರಮೇಶ್ ಜಾರಕಿಹೊಳಿ ವಿರುದ್ಧ ಗೋಕಾಕ್ ನಲ್ಲಿ ಅಶೋಕ್ ಪೂಜಾರಿ ಅವರನ್ನು ಕಣಕ್ಕಿಳಿಸುವಂತೆ ಕಾಂಗ್ರೆಸ್ ಮೇಲೆ ಒತ್ತಡವಿತ್ತು, ಆದರೆ ಸತೀಶ್ ಜಾರಕಿಹೊಳಿ ಸಲಹೆಯಂತೆ  ಲಖನ್ ಜಾರಕಿಹೊಳಿಯನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿತ್ತು,  ಹೀಗಾಗಿ ಲಿಂಗಾಯತ ಮತಗಳನ್ನು ಪಡೆಯುವ ಸಲುವಾಗಿ ಜೆಡಿಎಸ್ ಪಕ್ಷ ಅಶೋಕ್ ಪೂಜಾರಿಯನ್ನು ಸ್ಪರ್ಧೆಗೆ ಇಳಿಸಿತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT