ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಎರಡು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸುದ್ದಿಗಾರರ ಜತೆಮಾತನಾಡಿದ ಅವರು, ರಾಜ್ಯ ಮಂತ್ರಿಮಂಡಲ ಶೀಘ್ರದಲ್ಲೇ ವಿಸ್ತರಣೆಯಾಗಲಿದ್ದು, ಸಂಪುಟದಲ್ಲಿ ಮತ್ತೆ ಹೊಸದಾಗಿ ಉಪಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಠಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸಂಸತ್ತಿನಿಂದ ಅಂಗೀಕಾರ ಪಡೆದಿರುವ ಪೌರತ್ವ ತಿದ್ದುಪಡಿ ಮಸೂದೆ ದೇಶದ ಯಾವುದೇ ಪ್ರಜೆಯ ನಾಗರಿಕತ್ವದ ಹಕ್ಕು ಕಸಿದು ಕೊಳ್ಳುವುದಿಲ್ಲ. ಹೀಗಾಗಿ ಯಾವುದೇ ಸಮುದಾಯ ಆತಂಕ ಪಡುವ ಅಗತ್ಯವಿಲ್ಲ. ಈ ಬಗ್ಗೆ ಅನಗತ್ಯವಾಗಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಪ್ರಲ್ಹಾದ್ ಜೋಷಿ ತಿಳಿಸಿದರು.