ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ 
ರಾಜಕೀಯ

ಸದ್ಯಕ್ಕೆ ಜೆಡಿಎಸ್ ತೊರೆಯುವುದಿಲ್ಲ, ಮುಂದೇನಾಗಲಿದೆಯೋ ಗೊತ್ತಿಲ್ಲ; ರವೀಂದ್ರ ಶ್ರೀಕಂಠಯ್ಯ

ಸದ್ಯಕ್ಕೆ ಜೆಡಿಎಸ್ ತೊರೆಯುವ ಪ್ರಶ್ನೆಯೇ ಇಲ್ಲ,‌ ಮೂರೂವರೆ ವರ್ಷಗಳ ಬಳಿಕ ಮುಂದೇನಾಗಲಿದೆ ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಸೂಚ್ಯವಾಗಿ ಹೇಳಿದ್ದಾರೆ.

ಬೆಂಗಳೂರು: ಸದ್ಯಕ್ಕೆ ಜೆಡಿಎಸ್ ತೊರೆಯುವ ಪ್ರಶ್ನೆಯೇ ಇಲ್ಲ,‌ ಮೂರೂವರೆ ವರ್ಷಗಳ ಬಳಿಕ ಮುಂದೇನಾಗಲಿದೆ ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಸೂಚ್ಯವಾಗಿ ಹೇಳಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸಿ ಜೆಡಿಎಸ್ ಪಕ್ಷದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ತೊರೆದು ಬಿಜೆಪಿ ಸೇರುತ್ತೇನೆ ಎಂಬ ವರದಿಗಳನ್ನು ಕಂಡು ಆಶ್ಚರ್ಯವಾಗಿದೆ.

ಮುಂದಿನ ಮೂರೂವರೆ ವರ್ಷ ಜೆಡಿಎಸ್ ಶಾಸಕನಾಗಿ ಮುಂದುವರೆಯುತ್ತೇನೆ. ನಂತರದ ದಿನಗಳಲ್ಲಿ ಏನು ಬದಲಾವಣೆಯಾಗುತ್ತದೆ ನೋಡೋಣ ಎಂದು ಅಡ್ಡಗೋಡೆ ದೀಪ ಇಟ್ಟಂತೆ ಹೇಳಿದರು.


ಕೆ.ಆರ್.ಪೇಟೆ ನಾರಾಯಣಗೌಡ ಅವರ ಗೆಲುವು ಮಂಡ್ಯ ಜಿಲ್ಲೆಯ ಒಂದಿಷ್ಟು ಜೆಡಿಎಸ್ ಶಾಸಕರಿಗೆ ಬಿಜೆಪಿಯ ಮತ್ತೊಂದು ಹಂತದ ಆಪರೇಷನ್ ಕಮಲಕ್ಕೆ ಸಹಕಾರಿಯಾಗಲಿದ್ದು, ಯಡಿಯೂರಪ್ಪ ಪುತ್ರ ವಿಜಯೇಂದ್ರ ರವೀಂದ್ರ ಶ್ರೀಕಂಠಯ್ಯ ಅವರಿಗೂ ಗಾಳ ಹಾಕಿದ್ದಾರೆ ಎನ್ನಲಾಗಿತ್ತು. ಆದರೆ ಬಿಜೆಪಿ ಸೇರ್ಪಡೆ ವಿಚಾರವನ್ನು ರವಿಂದ್ರ ಶ್ರೀಕಂಠಯ್ಯ ಸದ್ಯಕ್ಕೆ ತಳ್ಳಿಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT