ರಾಜಕೀಯ

ಇಂದಿರಾ ಕ್ಯಾಂಟೀನ್‌ಗೆ ವಾಲ್ಮೀಕಿ ಹೆಸರು: ವಾಲ್ಮೀಕಿ‌ ಹೆಸರನ್ನು ರಾಜಕೀಯಕ್ಕೆ ಬಳಸಬೇಡಿ, ಸಿದ್ದರಾಮಯ್ಯ

Vishwanath S

ಬೆಂಗಳೂರು: ಇಂದಿರಾ ಕ್ಯಾಂಟೀನ್ ಗಳಿಗೆ ಐತಿಹಾಸಿಕ ಕವಿ ಮಹರ್ಷಿ ವಾಲ್ಮೀಕಿಯವರ ಹೆಸರು ಇಡುವ ಯೋಚನೆ ಇದೆಯಂತೆ. ಮಹರ್ಷಿ ವಾಲ್ಮೀಕಿಯವರ ಬಗ್ಗೆ ನಮಗೆಲ್ಲ ಅಪಾರವಾದ ಗೌರವ ಇದೆ. ಅವರ ಹೆಸರನ್ನು ಬಿಜೆಪಿ ತನ್ನ ಕ್ಷುಲಕ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಮಹಾಕವಿ ಗೆ ಅವಮಾನ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಗಳ  ಹೆಸರನ್ನು ಬದಲಾಯಿಸಲು ಹೊರಟಿರುವ ರಾಜ್ಯದ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸುತ್ತೇನೆ ಮತ್ತು ಇಂತಹ ಕ್ಷುಲಕ ರಾಜಕಾರಣ ವನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಪಡಿಸುತ್ತೇನೆ ಎಂದು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದರು.

ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಿ ಮಹರ್ಶಿ ವಾಲ್ಮೀಕಿ ಅನ್ನ ಕುಟೀರ ಎಂದು ಮರು ನಾಮಕರಣ ಮಾಡುವಂತೆ ಮಾಜಿ ಸಚಿವ ರಾಜೂಗೌಡ ಅವರು ಮನವಿ ಮಾಡಿದ್ದಾರೆ‌. ಅವರ ಮನವಿಯನ್ನು ಪರಿಶೀಲಿಸಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜತೆ ಚರ್ಚಿಸಿ ಬೆಂಗಳೂರು ಹೊರತು ಪಡಿಸಿ ರಾಜ್ಯದ ಉಳಿದ ಸ್ಥಳಗಳಲ್ಲಿ ಹೆಸರು ಬದಲಾವಣೆ ಮಾಡಲು ಚಿಂತನೆ ಮಾಡಲಾಗುವುದು ಎಂದು ಅಶೋಕ್ ಹೇಳಿದರು. 

SCROLL FOR NEXT