ರಾಜಕೀಯ

ಉಪಚುನಾವಣೇಲಿ ನಾನು ಸೋತಿರಬಹುದು ಆದ್ರೆ ಸತ್ತಿಲ್ಲ: ಎಚ್.ವಿಶ್ವನಾಥ್ ಗುಡುಗು

Raghavendra Adiga

ಹುಣಸೂರು: ಉಪಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, ಇನ್ನೂ ಸತ್ತಿಲ್ಲ ಎಂದು ಹುಣಸೂರು ಪರಾಜಿತ ಬಿಜೆಪಿ ಅಭ್ಯರ್ಥಿ ಎಚ್​. ವಿಶ್ವನಾಥ್​ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ನಾನು ಸೋತಿದ್ದೇನೆ. ಆದರೆ, ರಾಜಕೀಯವಾಗಿ, ಸಾರ್ವಜನಿಕವಾಗಿ ಅಭಿವೃದ್ಧಿ ವಿಚಾರದಲ್ಲಿ ಬದುಕಿದ್ದೇನೆ ಎಂದು ಹೇಳಿದರು.

ಬಿಜೆಪಿ ಸೇರಲು ನಾನು ಹಣ ತಿಂದಿದ್ದೇನೆ ಎಂದು ಕೆಲವರು ಸತ್ಯವಂತರಂತೆ ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ನಾನು ಹಣ ತಿಂದವನಲ್ಲ. ತಿನ್ನಿಸಿದವನು. ಯಾವತ್ತು ಯಾರ ಅನ್ನಕ್ಕೂ ಕೈ ಹಾಕಿದವನಲ್ಲ ಎಂದು ಅವರು ಕಿಡಿಕಾರಿದರು. 

ನಾನು  ಯಾರ ಅನ್ನವನ್ನು ಕಿತ್ತುಕೊಂಡಿಲ್ಲ. 85ಲಕ್ಷ ಮಕ್ಕಳಿಗೆ ಅನ್ನ ನೀಡಿದ್ದೇನೆ. ಯಶಸ್ವಿನಿ  ಯೋಜನೆಯಡಿ ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ನೀಡಿದ್ದೇನೆ ಎಂದ ಅವರು,   ಹುಣಸೂರನ್ನು  ಬೇರೆ ರೀತಿ ಅಭಿವೃದ್ಧಿ ಮಾಡಬೇಕು. ನನಗೆ ದೊಡ್ಡ ದೂರದರ್ಶಿತ್ವ ಇದೆ.  ಸೋತರೂ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ ಎಂದಯ ತಿಳಿಸಿದರು. 

ಅನರ್ಹ  ಎಂದು ಘೋಷಿಸಿದವರಿಗೆ ಜನ ತಕ್ಕ ಉತ್ತರ ನೀಡಿದ್ದಾರೆ,  ಕಪಟ ನಾಟಕದ ಸಮ್ಮಿಶ್ರ ಸರ್ಕಾರ  ಪತನವಾಗಿದ್ದು, ಅವರ ನಾಟಕಕ್ಕೆ ಜನ ಉಪಚುನಾವಣೆಯಲ್ಲಿ ಸರಿಯಾಗಿ ಉತ್ತರ ನೀಡಿದ್ದಾರೆ  ಎಂದು ಕುಟುಕಿದರು.
 

SCROLL FOR NEXT