ಸಿ.ಟಿ.ರವಿ 
ರಾಜಕೀಯ

ಪೌರತ್ವ ಕಾಯ್ದೆ: ಬಿಜೆಪಿ ಜನಾದೇಶವನ್ನು ಗೌರವಿಸುತ್ತಿದೆ- ಸಿ.ಟಿ.ರವಿ

ಯಾವ ಕಾರಣಕ್ಕೆ ಅಧಿಕಾರಕ್ಕೆ ಬಂದಿತ್ತೋ ಅದೇ ಕಾರಣಕ್ಕೆ ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಯನ್ನು ಜಾರಿಗೆ ತಂದಿದೆ. ಜನರು ಬಯಸಿದ್ದನ್ನೇ ಬಿಜೆಪಿ ಮಾಡಿದೆ. ಇದನ್ನು ವಿರೋಧಿಸುವವರು ಪ್ರಜಾಪ್ರಭುತ್ವದ ವಿರೋಧಿಗಳು, ಜನಾದೇಶ ವಿರೋಧಿಸುವವರಾಗುತ್ತಾರೆಂದು ಸಚಿವ ಸಿ.ಟಿ.ರವಿಯವರು ಹೇಳಿದ್ದಾರೆ. 

ಬೆಂಗಳೂರು: ಯಾವ ಕಾರಣಕ್ಕೆ ಅಧಿಕಾರಕ್ಕೆ ಬಂದಿತ್ತೋ ಅದೇ ಕಾರಣಕ್ಕೆ ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಯನ್ನು ಜಾರಿಗೆ ತಂದಿದೆ. ಜನರು ಬಯಸಿದ್ದನ್ನೇ ಬಿಜೆಪಿ ಮಾಡಿದೆ. ಇದನ್ನು ವಿರೋಧಿಸುವವರು ಪ್ರಜಾಪ್ರಭುತ್ವದ ವಿರೋಧಿಗಳು, ಜನಾದೇಶ ವಿರೋಧಿಸುವವರಾಗುತ್ತಾರೆಂದು ಸಚಿವ ಸಿ.ಟಿ.ರವಿಯವರು ಹೇಳಿದ್ದಾರೆ. 

ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆಗೆ ಬೆಂಬಲ ವ್ಯಕ್ತಪಡಿಸಿರುವ ರವಿಯವರು, ಬಿಜೆಪಿಗೆ ಭಯಪಡಿಸುವ ಅಗತ್ಯವಿಲ್ಲ. ಯು.ಟಿ ಖಾದರ್ ರಂತಹ ಮನಸ್ಥಿಯಿಂದ ಗೋದ್ರಾ ಘಟನೆ ನಡೆಯಿತು. ಗೋದ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚುವ ಹಾಗೂ ಕರ ಸೇವಕರನ್ನು ಸುಡುವ ಕೆಲಸಗಳಾಗಿರುವುದು ಇಂತಹ ನಾಯಕರಿಂದಲೇ. ಆದರೆ, ಗೋದ್ರಾ ರೈಲಿಗೆ ಬೆಂಕಿ ಹಚ್ಚಿದ ಘಟನೆಗೆ ಪ್ರತಿಯಾಗಿ ಏನಾಯಿತೆಂಬುದನ್ನೂ ಖಾದರ್ ನೆನಪಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. 

ಕಾಂಗ್ರೆಸ್ ನಾಯಕರು ಪಾಕಿಸ್ತಾನ ಪ್ರಜೆಗಳಿಗೂ ಪೌರತ್ವ ನೀಡುವಂತೆ ಆಗ್ರಹಿಸುತ್ತಿದ್ದಾರೆ. ವಲಸಿಗರಿಗೂ ನುಸುಳುಕೋರರಿಗೂ ಸಾಕಷ್ಟು ವ್ಯತ್ಯಾಸಗಳಿದೆ. ಅಂತವರಿಗೆ ಆಧಾರ್ ಕಾರ್ಡ್ ನೀಡುವ ಪ್ರಶ್ನೆಯೇ ಿಲ್ಲ. ಸರ್ಕಾರ ತಮ್ಮ ಪರವಾಗಿ ಕೆಲಸ ಮಾಡುತ್ತಿದೆ ಎಂಬ ನಂಬಿಕೆ ಇರುವುದರಿಂದಲೇ ಜನರು ತಾಳ್ಮೆಯಿಂದ ಇದ್ದಾರೆಂದು ತಿಳಿಸಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಈ ಹಿಂದೆ ಹೇಳಿಕೆ ನೀಡಿದ್ದ ಖಾದರ್ ಅವರು, ಕಾಯ್ದೆ ವಿರುದ್ಧ ಈಶಾನ್ಯ ರಾಜ್ಯಗಳಲ್ಲಿ ಗಲಭೆ ಭುಗಿಲೆದ್ದಿದೆ. ಅದೇ ರೀತಿ ರಾಜ್ಯದಲ್ಲಿಯೂ ಗಲಭೆ ಸಂಭವಿಸಬಹುದು ಎಂದಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT