ಮಧುಸೂದನ್ ಮಿಸ್ತ್ರಿ 
ರಾಜಕೀಯ

'ಕಾಂಗ್ರೆಸ್ ನಾಯಕತ್ವ ಆಯ್ಕೆ ಬಗ್ಗೆ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹ'

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಹಿಂಪಡೆಯುವಂತೆ ಎಐಸಿಸಿ ವೀಕ್ಷಕರು ಸಲಹೆ ನೀಡಿ, ಪ್ರತಿಪಕ್ಷ ನಾಯಕನಾಗಿ ಮುಂದುವರಿಯುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಹಿಂಪಡೆಯುವಂತೆ ಎಐಸಿಸಿ ವೀಕ್ಷಕರು ಸಲಹೆ ನೀಡಿ, ಪ್ರತಿಪಕ್ಷ ನಾಯಕನಾಗಿ ಮುಂದುವರಿಯುವಂತೆ ಮನವಿ ಮಾಡಿದ್ದಾರೆ.

ಹಿರಿಯ ನಾಯಕರು ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಮುಂದುವರಿಸಿ, ಶಾಸಕಾಂಗ ಪಕ್ಷದ ನಾಯಕನ ಸ್ಥಾನವನ್ನು ಬೇರೆಯವರಿಗೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ಉದ್ಭವಿಸಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಎಐಸಿಸಿ ವೀಕ್ಷಕರಾಗಿ ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂಧನ ಮಿಸ್ತ್ರಿ ಹಾಗೂ ಎಐಸಿಸಿ ಕಾರ್ಯದರ್ಶಿ ಭಕ್ತ ಚರಣ ದಾಸ್ ಅವರು ರಾಜ್ಯದ 50 ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಕಳೆದ ಬಾರಿ ಪ್ರತಿಪಕ್ಷ ನಾಯಕನ ಆಯ್ಕೆ ಸಂದರ್ಭದಲ್ಲಿ ಎಲ್ಲರನ್ನು ಒಟ್ಟಿಗೇ ಕರೆದು ಅಭಿಪ್ರಾಯ ಸಂಗ್ರಹಿಸಲು ಆಗಮಿಸಿದ ಸಂದರ್ಭದಲ್ಲಿ ಕೆಲವರು ತಂಡವಾಗಿ ಸಿದ್ದರಾಮಯ್ಯ ಪರ ಸಹಿ ಸಂಗ್ರಹ ಮಾಡಿ ವೀಕ್ಷಕರಿಗೆ ನೀಡಿದ್ದ ಬಗ್ಗೆ ರಾಜ್ಯ ನಾಯಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಬಾರಿ ಪ್ರತಿಯೊಬ್ಬ ನಾಯಕರಿಂದ ಪ್ರತ್ಯೇಕ ಅಭಿಪ್ರಾಯ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಬಲಗೊಳ್ಳಬೇಕಾದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವಾಗಬೇಕು. ಈ ಹಿನ್ನೆಲೆಯಲ್ಲಿ ಎಲ್ಲ ಸಮುದಾಯಗಳ ನಾಯಕರಿಗೂ ಅಧಿಕಾರ ಹಂಚಿಕೆಯಾಗಬೇಕು ಎಂದು ಎಐಸಿಸಿ ವೀಕ್ಷಕರ ಎದುರು ಬಹುತೇಕ ರಾಜ್ಯ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT