ಶೋಭಾ ಕರಂದ್ಲಾಜೆ 
ರಾಜಕೀಯ

ಮಂಗಳೂರು ಹಿಂಸಾಚಾರಕ್ಕೆ ಸಿದ್ದರಾಮಯ್ಯ, ಹೆಚ್'ಡಿಕೆ ಕಾರಣ: ಶೋಭಾ ಕರಂದ್ಲಾಜೆ

ಮಂಗಳೂರಿನಲ್ಲಿ ಇತ್ತೀಚೆಗೆ ಸಂಭವಿಸಿದ ಹಿಂಸಾಚಾರಕ್ಕೆ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿಯವರೇ ಕಾರಣ ಎಂದು ಸಂಸದೆ ಶೋಭಾ ಕರಂದ್ಲಾಜೆಯವರು ಹೇಳಿದ್ದಾರೆ. 

ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ಸಂಭವಿಸಿದ ಹಿಂಸಾಚಾರಕ್ಕೆ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿಯವರೇ ಕಾರಣ ಎಂದು ಸಂಸದೆ ಶೋಭಾ ಕರಂದ್ಲಾಜೆಯವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿಯವರು ಸುಖಾಸುಮ್ಮನೆ ರಾಜ್ಯ ಸರ್ಕಾರವನ್ನು ದೂಷಿಸುತ್ತಿವೆ. ಇಬ್ಬರೂ ಮಾಜಿ ಸಿಎಂಗಳು ತಮ್ಮ ಅವಧಿಯಲ್ಲಿ ಪಿಎಫ್ಐ ಹಾಗೂ ಕೆಎಫ್'ಡಿ ಸಂಘಟನೆಗಳನ್ನು ಪೋಷಿಸಿದ್ದೇ ಹಿಂಸಾಚಾರಕ್ಕೆ ಕಾರಣ. ಪಿಎಫ್ಐಗೆ ಸೇರಿದ ಕ್ರಿಮಿನಲ್ ಗಳ ವಿರುದ್ಧ ಅಂದಿನ ಕಾಂಗ್ರೆಸ್ ಸರ್ಕಾರ 1,600 ಪ್ರಕರಣಗಳನ್ನು ಹಿಂಪಡೆದು, ಜೈಲಿನಿಂದ ಬಿಡುಗಡೆ ಮಾಡಿತ್ತು ಎಂದು ಹೇಳಿದ್ದಾರೆ. 

ಮೈಸೂರಿನಲ್ಲಿ ಗಲಭೆ ಸೃಷ್ಟಿಯಾದಾಗ ಪೊಲೀಸರು 45 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು. ಆದರೆ, ಸಿದ್ದರಾಮಯ್ಯ ಅವರು ಆ ಪ್ರಕರಣಗಳನ್ನು ಕೈಬಿಡುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು ಇನ್ನು ಶಾಸಕ ಯುಟಿ ಖಾದರ್ ಕೂಡ ಸೂಕ್ಷ್ಮವಲ್ಲದ ರೀತಿಯಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮಂಗಳೂರಿನಲ್ಲಿ ಹಿಂಸಾಚಾರ ಸೃಷ್ಟಿಸಿದ್ದವರು ತಮ್ಮ ಮುಖಗಳನ್ನು ಮುಚ್ಚಿಕೊಂಡಿರುವುದು ಕಂಡು ಬಂದಿದೆ. ಇನ್ನು ಕೆಲವರು ಸಿದ್ದರಾಮಯ್ಯ ಅವರ ಬೆಂಬಲ ಹಿನ್ನೆಲೆಯಲ್ಲಿ ನೇರವಾಗಿ ಹಿಂಸಾಚಾರ ಸೃಷ್ಟಿಸಿದ್ದರು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT