ಡಾ. ಅಂಬೇಡ್ಕರ್ 
ರಾಜಕೀಯ

'ಸಂವಿಧಾನ ಸುಡಲು ಮುಂದಾದ ಅಲ್ಪರಿಂದ ಪಾಠ ಹೇಳಿಸಿಕೊಳ್ಳುವ ಜರೂರತ್ತು ನನಗಿಲ್ಲ'

ಯೇಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ಶಿಲಾನ್ಯಾಸ ಮಾಡಿದ್ದು, ಈಗ ವಾಕ್ಸಮರಕ್ಕೆ ಕಾರಣವಾಗಿದೆ

ಬೆಂಗಳೂರು:  ಯೇಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ಶಿಲಾನ್ಯಾಸ ಮಾಡಿದ್ದು, ಈಗ ವಾಕ್ಸಮರಕ್ಕೆ ಕಾರಣವಾಗಿದೆ

ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರೂ ಟ್ವೀಟ್ ಮಾಡಿದ್ದು, ನಮ್ಮ ಪ್ರಜಾತಂತ್ರ ವ್ಯವಸ್ಥೆಯ ಭದ್ರಬುನಾದಿಯಾದ ಸಮಾನತೆ ಮತ್ತು ಸರ್ವಧರ್ಮ ಸಹಿಷ್ಣುತೆಯಲ್ಲಿ ನಂಬಿಕೆ ಇಟ್ಟಿರುವವನು ನಾನು. ನನ್ನನ್ನು ಏಳು ಬಾರಿ ಗೆಲ್ಲಿಸಿರುವ ಕನಕಪುರ ಕ್ಷೇತ್ರದಲ್ಲಿ ಎಲ್ಲ ಜಾತಿ, ಧರ್ಮದ ಜನರೂ ಇದ್ದಾರೆ. ಅವರ ಭಾವನೆಗಳನ್ನು ಗೌರವಿಸುವುದು ನನ್ನ ಧರ್ಮ.

ಡಾ. ಬಿ.ಆರ್ ಅಂಬೇಡ್ಕರ್ ಸಾಹೇಬರ ಸಂವಿಧಾನ ಸುಡಲು ಮುಂದಾದ ಅಲ್ಪರಿಂದ ಪಾಠ ಹೇಳಿಸಿಕೊಳ್ಳುವ ಜರೂರತ್ತು ನನಗಿಲ್ಲ ಎಂದು ಡಿ ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಯೇಸು ಪ್ರತಿಮೆಗೆ ಜಾಗ ಕೊಟ್ಟಿರುವುದಷ್ಟೇ ಅಲ್ಲ, ನಾಣು ಸಚಿವನಾಗಿದ್ದಾಗ ಕೆಂಪೇಗೌಡ ಪ್ರಾಧಿಕಾರ ರಚನೆಯಾಗಿದೆ. ಮೆಯೋಹಾಲ್ ನಲ್ಲಿ ಕಚೇರಿ ಸ್ಥಾಪನೆಯಾಗಿ, ಬೆಂಗಳೂರಿನಲ್ಲಿ ಐದು ಎಕರೆ ಜಮೀನು ಮಂಜೂರಾಗಿದೆ. 

ಕೆಂಪೇಗೌಡ ಜಯಂತಿ ಆಚರಣೆ, ತನ್ನಿಮಿತ್ತ ಸರಕಾರಿ ರಜೆ ಘೋಷಣೆ ಮಾಡಿಸಿದ್ದೇನೆ. ಆದಿಚುಂಚನಗಿರಿ ಶ್ರೀ ದಿವಂಗತ ಬಾಲಗಂಗಾಧರನಾಥ ಶ್ರೀಗಳ ಹುಟದಟೂರು ರಾಮನಗರದ ಬಿಡದಿಯ ಬಾಣಂದೂರು ಹಾಗೂ ಸಿದ್ದಗಂಗಾ ಶ್ರೀಗಳಾದ ಶಿವೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ರಾಮನಗರದ ಮಾಗಡಿ ಗ್ರಾಮದ ಪ್ರಗತಿಗೆ ತಲಾ 25 ಕೋಟಿ ರೂ. ನಮ್ಮ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಂಜೂರಾಗಿದೆ. ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ  ಎಂದು ಟ್ವೀಟ್  ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT