ವಿಧಾನಸಭೆಯಲ್ಲಿ ನಿನ್ನೆ ಬಿಜೆಪಿ ಸದಸ್ಯರ ಪ್ರತಿಭಟನೆಯ ಚಿತ್ರ 
ರಾಜಕೀಯ

ಬಿಜೆಪಿ ಸದಸ್ಯರ ಬಿಗಿಪಟ್ಟು: ವಿಧಾನಸಭೆ ಕಲಾಪ ನಾಳೆಗೆ ಮುಂದಕ್ಕೆ

ವಿಧಾನಮಂಡಲದ ಬಜೆಟ್ ಅಧಿವೇಶನದ ಎರಡನೇ ದಿನವಾದ ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಕೋಲಾಹಲ ಸೃಷ್ಟಿ ಮಾಡಿದ್ದರಿಂದ ...

ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನದ ಎರಡನೇ ದಿನವಾದ ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಕೋಲಾಹಲ ಸೃಷ್ಟಿ ಮಾಡಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಇಂದು ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸರ್ಕಾರಕ್ಕೆ ಬಹುಮತವಿಲ್ಲ, ಧಿಕ್ಕಾರ ಧಿಕ್ಕಾರ; ಸಿ ಎಂ ಗೋ ಬ್ಯಾಕ್‍  ಎಂದು ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿಪಡಿಸಿದರು.

 ಸ್ಪೀಕರ್ ರಮೇಶ್ ಕುಮಾರ್, ರಾಜ್ಯಪಾಲರ ಭಾಷಣಕ್ಕೆ ಗೌರವ ಸೂಚಿಸಬೇಕೆಂದು, ಸಕಾರಣವಿಲ್ಲದೇ ಪ್ರತಿಭಟನೆ ನಡೆಸುವುದು ತರವಲ್ಲ ಎಂದು ಖಾರವಾಗಿ ಹೇಳಿದರು. ಆದರೂ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿ ಮಾಡಿದ ಕಾರಣ ಸದನವನ್ನು ಕೆಲಕಾಲ ಮುಂದೂಡಲಾಯಿತು.

ನಂತರ ಸದನ ಸಮಾವೇಶಗೊಂಡಾಗಲೂ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ, ಬಿಜೆಪಿ ಸದಸ್ಯರು ಪಟ್ಟು ಸಡಿಲಿಸಲಿಲ್ಲ. ಧರಣಿ, ಗದ್ದಲ, ಘೋಷಣೆಗಳ ಕೂಗಾಟದಿಂದ ಸದನ ಗೊಂದಲದ ಗೂಡಾಯಿತು. ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿಯೂ ನಡೆಯಿತು.

 ಕಾಂಗ್ರೆಸ್ ವಿರುದ್ಧ ಬಹಿರಂಗ ಬಂಡಾಯ ಸಾರಿರುವ ನಾಲ್ವರು ಕಾಂಗ್ರೆಸ್ ಶಾಸಕರಿಗೆ ಎಚ್ಚರಿಕೆಯ ಸಂದೇಶದ ನಡುವೆಯೂ ಇಂದಿನ ಕಲಾಪಕ್ಕೆ ಗೈರು ಹಾಜರಾಗಿ ವಿರೋಧಿ ಪಾಳಯಕ್ಕೆ ಹೊಸ ಅಸ್ತ್ರ ಕೊಟ್ಟಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿಧಾನಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT