ದೇವೇಗೌಡ 
ರಾಜಕೀಯ

ಸಂಸತ್ತಿನಲ್ಲಿ ದೇವೇಗೌಡರನ್ನು ಕೆಣಕಿದ್ದ ಮೋದಿಗೆ ಟ್ವೀಟ್ ಮೂಲಕ ಟಾಂಗ್ ಕೊಟ್ಟ ಎಚ್​ಡಿಡಿ

ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಪಕ್ಕ ಕುಳಿತಿದ್ದ ದೇವೇಗೌಡರನ್ನು ಕರ್ನಾಟಕ ರೈತರ ಸಾಲಮನ್ನಾ ವಿಚಾರ ಎತ್ತಿ ಪ್ರಧಾನಿ ನರೇಂದ್ರ ಮೋದಿ ಕೆಣಕಿದ್ದು ಇದಕ್ಕೆ ಮಾಜಿ ಪ್ರಧಾನಿ ....

ಬೆಂಗಳೂರು: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಪಕ್ಕ ಕುಳಿತಿದ್ದ ದೇವೇಗೌಡರನ್ನು ಕರ್ನಾಟಕ ರೈತರ ಸಾಲಮನ್ನಾ ವಿಚಾರ ಎತ್ತಿ ಪ್ರಧಾನಿ ನರೇಂದ್ರ ಮೋದಿ ಕೆಣಕಿದ್ದು ಇದಕ್ಕೆ ಮಾಜಿ ಪ್ರಧಾನಿ ದೇವೇಗೌಡ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.
48 ಸಾವಿರ ಕೋಟಿ ರು. ಸಾಲಮನ್ನಾ ಆಗಲಿದೆ ಎಂದು ಹೇಳಿ ರಾಜ್ಯದಲ್ಲಿ ಇದುವರೆಗೆ ಏಳು ಸಾವಿರ ರೈತರ ಸಾಲವಷ್ಟೇ ಮನ್ನಾ ಆಗಿದೆ ಎಂದು ನರೇಂದ್ರ ಮೋದಿ ದೇವೇಗೌಡರನ್ನು ಸಂಸತ್ತಿನಲ್ಲಿ ಕೆಣಕಿದ್ದರು. ಆದರೆ ಆ ವೇಳೆ ಗಂಭೀರವಾಗಿಯೇ ಕುಳಿತಿದ್ದ ದೇವೇಗೌಡ ಇದೀಗ ಟ್ವೀಟ್ ಮೂಲಕ ಮೋದಿಗೆ ಟಾಂಗ್ ನೀಡಿದ್ದಾರೆ.
ಕರ್ನಾಟಕದಲ್ಲಿ ರೈತರ ಸಾಲಮನ್ನಾ ಯೋಜನೆ ಜಾರಿಯಲ್ಲಿದೆ. ಆದರೆ ಮೋದಿ ನೀಡಿರುವ ಭರವಸೆ ರಾಮ ಮಂದಿರ, ಗಂಗಾ ನದಿ ಶುದ್ದೀಕರಣ,ನದಿ ಜೋಡಣೆ, 15 ಲಕ್ಷ ರೂ. ಗಳನ್ನು ಜನರ ಖಾತೆಗೆ ಹಾಕುವೆ ಎಂದದ್ದು ಸೇರಿ ಹಲವು ಭರವಸೆಗಳ ಸ್ಥಿತಿ "ಏನೂ ಇಲ್ಲ" ಎಂಬಂತಾಗಿದೆ ಎಂದು ಟೀಕಿಸಿದ್ದಾರೆ.
ಅಲ್ಲದೆ "ಏನೂ ಇಲ್ಲ" ಎಂಬ ಸ್ಥಿತಿಗಿಂತ "ಜಾರಿಯಲ್ಲಿದೆ" ಎಂಬ ಸ್ಥಿತಿ ಉತ್ತಮವಾದದ್ದು ಎಂದೂ ಅವರು ಹೇಳಿದ್ದಾರೆ.
ಇನ್ನು ಬಿಜೆಪಿ ಪಾಲಿಗೆ ಸಧ್ಯ ಜಾರಿಯಲ್ಲಿರುವ ಸ್ಥಿತಿ ಎಂದರೆ ಅದು ಕರ್ನಾಟಕದಲ್ಲಿನ ಆಪರೇಷನ್ ಕಮಲ ಮಾತ್ರ ಎಂದೂ ಅವರು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಮೋದಿ ಹಾಗೂ ರಾಜ್ಯ ಬಿಜೆಪಿ ನಾಯಕರನ್ನು ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT