ದೇವೇಗೌಡ 
ರಾಜಕೀಯ

ಸಂಸತ್ತಿನಲ್ಲಿ ದೇವೇಗೌಡರನ್ನು ಕೆಣಕಿದ್ದ ಮೋದಿಗೆ ಟ್ವೀಟ್ ಮೂಲಕ ಟಾಂಗ್ ಕೊಟ್ಟ ಎಚ್​ಡಿಡಿ

ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಪಕ್ಕ ಕುಳಿತಿದ್ದ ದೇವೇಗೌಡರನ್ನು ಕರ್ನಾಟಕ ರೈತರ ಸಾಲಮನ್ನಾ ವಿಚಾರ ಎತ್ತಿ ಪ್ರಧಾನಿ ನರೇಂದ್ರ ಮೋದಿ ಕೆಣಕಿದ್ದು ಇದಕ್ಕೆ ಮಾಜಿ ಪ್ರಧಾನಿ ....

ಬೆಂಗಳೂರು: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಪಕ್ಕ ಕುಳಿತಿದ್ದ ದೇವೇಗೌಡರನ್ನು ಕರ್ನಾಟಕ ರೈತರ ಸಾಲಮನ್ನಾ ವಿಚಾರ ಎತ್ತಿ ಪ್ರಧಾನಿ ನರೇಂದ್ರ ಮೋದಿ ಕೆಣಕಿದ್ದು ಇದಕ್ಕೆ ಮಾಜಿ ಪ್ರಧಾನಿ ದೇವೇಗೌಡ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.
48 ಸಾವಿರ ಕೋಟಿ ರು. ಸಾಲಮನ್ನಾ ಆಗಲಿದೆ ಎಂದು ಹೇಳಿ ರಾಜ್ಯದಲ್ಲಿ ಇದುವರೆಗೆ ಏಳು ಸಾವಿರ ರೈತರ ಸಾಲವಷ್ಟೇ ಮನ್ನಾ ಆಗಿದೆ ಎಂದು ನರೇಂದ್ರ ಮೋದಿ ದೇವೇಗೌಡರನ್ನು ಸಂಸತ್ತಿನಲ್ಲಿ ಕೆಣಕಿದ್ದರು. ಆದರೆ ಆ ವೇಳೆ ಗಂಭೀರವಾಗಿಯೇ ಕುಳಿತಿದ್ದ ದೇವೇಗೌಡ ಇದೀಗ ಟ್ವೀಟ್ ಮೂಲಕ ಮೋದಿಗೆ ಟಾಂಗ್ ನೀಡಿದ್ದಾರೆ.
ಕರ್ನಾಟಕದಲ್ಲಿ ರೈತರ ಸಾಲಮನ್ನಾ ಯೋಜನೆ ಜಾರಿಯಲ್ಲಿದೆ. ಆದರೆ ಮೋದಿ ನೀಡಿರುವ ಭರವಸೆ ರಾಮ ಮಂದಿರ, ಗಂಗಾ ನದಿ ಶುದ್ದೀಕರಣ,ನದಿ ಜೋಡಣೆ, 15 ಲಕ್ಷ ರೂ. ಗಳನ್ನು ಜನರ ಖಾತೆಗೆ ಹಾಕುವೆ ಎಂದದ್ದು ಸೇರಿ ಹಲವು ಭರವಸೆಗಳ ಸ್ಥಿತಿ "ಏನೂ ಇಲ್ಲ" ಎಂಬಂತಾಗಿದೆ ಎಂದು ಟೀಕಿಸಿದ್ದಾರೆ.
ಅಲ್ಲದೆ "ಏನೂ ಇಲ್ಲ" ಎಂಬ ಸ್ಥಿತಿಗಿಂತ "ಜಾರಿಯಲ್ಲಿದೆ" ಎಂಬ ಸ್ಥಿತಿ ಉತ್ತಮವಾದದ್ದು ಎಂದೂ ಅವರು ಹೇಳಿದ್ದಾರೆ.
ಇನ್ನು ಬಿಜೆಪಿ ಪಾಲಿಗೆ ಸಧ್ಯ ಜಾರಿಯಲ್ಲಿರುವ ಸ್ಥಿತಿ ಎಂದರೆ ಅದು ಕರ್ನಾಟಕದಲ್ಲಿನ ಆಪರೇಷನ್ ಕಮಲ ಮಾತ್ರ ಎಂದೂ ಅವರು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಮೋದಿ ಹಾಗೂ ರಾಜ್ಯ ಬಿಜೆಪಿ ನಾಯಕರನ್ನು ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT