ಬೆಂಗಳೂರಿಗೆ ಬಸನಗೌಡ ಪಾಟೀಲ್, ಸುಧಾಕರ್ ವಾಪಸ್ 
ರಾಜಕೀಯ

ಫಲ ನೀಡಿದ ಸಿದ್ದು ಬ್ರಹ್ಮಾಸ್ತ್ರ, ಮುಂಬೈನಿಂದ ಬೆಂಗಳೂರಿಗೆ ಬಸನಗೌಡ ಪಾಟೀಲ್, ಸುಧಾಕರ್ ವಾಪಸ್

ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ಪಕ್ಷದ ತಲೆ ನೋವಿಗೆ ಕಾರಣವಾಗಿದ್ದ ರೆಬೆಲ್ ಶಾಸಕರು ಸಿದ್ದರಾಮಯ್ಯ ಅವರ ಬ್ರಹ್ಮಾಸ್ತ್ರಕ್ಕೆ ಬೆಚ್ಚಿ ಬಿದ್ಜಿದ್ದು, ಬೆಂಗಳೂರಿಗೆ ದೌಡಾಯಿಸಿದ್ದಾರೆ.

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ಪಕ್ಷದ ತಲೆ ನೋವಿಗೆ ಕಾರಣವಾಗಿದ್ದ ರೆಬೆಲ್ ಶಾಸಕರು ಸಿದ್ದರಾಮಯ್ಯ ಅವರ ಬ್ರಹ್ಮಾಸ್ತ್ರಕ್ಕೆ ಬೆಚ್ಚಿ ಬಿದ್ಜಿದ್ದು, ಬೆಂಗಳೂರಿಗೆ ದೌಡಾಯಿಸಿದ್ದಾರೆ.
ಮೂಲಗಳ ಪ್ರಕಾರ ಮುಂಬೈನಲ್ಲಿದ್ದ ಚಿಕ್ಕಬಳ್ಳಾಪುರ ಶಾಸಕ ಡಾ. ಕೆ ಸುಧಾಕರ್ ಹಾಗೂ ಬಸನಗೌಡ ಪಾಟೀಲ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಯಚೂರು ಕಾಂಗ್ರೆಸ್ ಶಾಸಕ ಬಸನಗೌಡ ದಡ್ಡಲ್ ಅವರು, ತಾವು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇವೆ. ನಾವು ಎಲ್ಲಿಗೂ ಹೋಗಿರಲಿಲ್ಲ. ಪಕ್ಷದ ಆಹ್ವಾನದ ಮೇರೆಗೆ ಇದೀಗ ಶಾಸಕಾಂಗ ಸಭೆಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ್ದೇನೆ ಎಂದು ಹೇಳಿದ್ದಾರೆ. 
ಇನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ. ಕೆ. ಸುಧಾಕರ್​ ಅವರೂ ಕೂಡ ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ್ದು, ಶುಕ್ರವಾರ ಬೆಳಗ್ಗೆ ಸುಧಾಕರ್​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದರು. ಈ ಸಂದರ್ಭದಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ಬಜೆಟ್​ ಮಂಡನೆಗೂ ಮುನ್ನ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಪಾಲ್ಗೊಳ್ಳುವಂತೆ ಮತ್ತು ಅಧಿವೇಶನದಲ್ಲಿ ಹಾಜರಿರುವಂತೆ ಎಲ್ಲಾ ಶಾಸಕರಿಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳಲು ಸುಧಾಕರ್​ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT