ಸ್ಪೀಕರ್ ಗೆ ದೂರು ನೀಡುತ್ತಿರುವ ಕಾಂಗ್ರೆಸ್ ನಾಯಕರು 
ರಾಜಕೀಯ

ನಾಲ್ವರು ಅತೃಪ್ತ​ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ​ಗೆ ಕಾಂಗ್ರೆಸ್ ದೂರು

ವಿಪ್ ಸೇರಿದಂತೆ ಪಕ್ಷದ ಎಲ್ಲಾ ಆದೇಶಗಳನ್ನು​ ಉಲ್ಲಂಘಿಸಿದ ಕಾಂಗ್ರೆಸ್ ನ ನಾಲ್ವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ....

ಬೆಂಗಳೂರು: ವಿಪ್ ಸೇರಿದಂತೆ ಪಕ್ಷದ ಎಲ್ಲಾ ಆದೇಶಗಳನ್ನು​ ಉಲ್ಲಂಘಿಸಿದ ಕಾಂಗ್ರೆಸ್ ನ ನಾಲ್ವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ದೂರು ನೀಡಿದ್ದಾರೆ.
ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರು, ಪಕ್ಷದ ಶಾಸಕಾಂಗ ಸಭೆಗೆ ಹಾಜರಾಗುವಂತೆ ನೀಡಿದ್ದ ವಿಪ್​ ಉಲ್ಲಂಘನೆ, ನೋಟಿಸ್ ಗೆ ಸಮರ್ಪಕ ಉತ್ತರ ನೀಡದೆ ಇರುವುದು ಹಾಗೂ ಬಜೆಟ್​ ಅಧಿವೇಶನಕ್ಕೂ ಗೈರಾದ ರಮೇಶ್​ ಜಾರಕಿಹೊಳಿ, ಮಹೇಶ್​ ಕುಮಟಳ್ಳಿ, ಉಮೇಶ್​ ಜಾಧವ್​ ಹಾಗೂ ನಾಗೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದೂರು ನೀಡಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಪರಮೇಶ್ವರ್, ಸಚಿವ ಕೃಷ್ಣಬೈರೇಗೌಡ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಾಥ್ ನೀಡಿದರು.
ಅತೃಪ್ತ ಶಾಸಕರ ಅನರ್ಹಗೊಳಿಸುವ ಸಂಬಂಧ ಸಿದ್ದರಾಮಯ್ಯ ಅವರು ವಕೀಲ ಶಶಿಕಿರಣ ಮತ್ತು ತಂಡದಿಂದ ಕಾನೂನು ಸಲಹೆ ಪಡೆದು, ಬಳಿಕ ಸ್ಪೀಕರ್​ಗೆ ದೂರು ನೀಡಿದ್ದಾರೆ.
ಪತ್ರಿಕಾ ವರದಿಗಳು, ಮಾಧ್ಯಮಕ್ಕೆ ನೀಡಿದ ಪ್ರತಿಕ್ರಿಯೆ, ಸಿಎಲ್​ಪಿ ಸಂಬಂಧ ನೀಡಿದ ನೊಟೀಸ್ ಪ್ರತಿಗಳ ಸಮೇತ 82 ಪುಟಗಳ ದೂರಿನ ಪ್ರತಿಯನ್ನು ಸ್ಪೀಕರ್​ಗೆ ಸಲ್ಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT