ಸ್ಪೀಕರ್ ಗೆ ದೂರು ನೀಡುತ್ತಿರುವ ಕಾಂಗ್ರೆಸ್ ನಾಯಕರು 
ರಾಜಕೀಯ

ನಾಲ್ವರು ಅತೃಪ್ತ​ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ​ಗೆ ಕಾಂಗ್ರೆಸ್ ದೂರು

ವಿಪ್ ಸೇರಿದಂತೆ ಪಕ್ಷದ ಎಲ್ಲಾ ಆದೇಶಗಳನ್ನು​ ಉಲ್ಲಂಘಿಸಿದ ಕಾಂಗ್ರೆಸ್ ನ ನಾಲ್ವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ....

ಬೆಂಗಳೂರು: ವಿಪ್ ಸೇರಿದಂತೆ ಪಕ್ಷದ ಎಲ್ಲಾ ಆದೇಶಗಳನ್ನು​ ಉಲ್ಲಂಘಿಸಿದ ಕಾಂಗ್ರೆಸ್ ನ ನಾಲ್ವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ದೂರು ನೀಡಿದ್ದಾರೆ.
ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರು, ಪಕ್ಷದ ಶಾಸಕಾಂಗ ಸಭೆಗೆ ಹಾಜರಾಗುವಂತೆ ನೀಡಿದ್ದ ವಿಪ್​ ಉಲ್ಲಂಘನೆ, ನೋಟಿಸ್ ಗೆ ಸಮರ್ಪಕ ಉತ್ತರ ನೀಡದೆ ಇರುವುದು ಹಾಗೂ ಬಜೆಟ್​ ಅಧಿವೇಶನಕ್ಕೂ ಗೈರಾದ ರಮೇಶ್​ ಜಾರಕಿಹೊಳಿ, ಮಹೇಶ್​ ಕುಮಟಳ್ಳಿ, ಉಮೇಶ್​ ಜಾಧವ್​ ಹಾಗೂ ನಾಗೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದೂರು ನೀಡಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಪರಮೇಶ್ವರ್, ಸಚಿವ ಕೃಷ್ಣಬೈರೇಗೌಡ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಾಥ್ ನೀಡಿದರು.
ಅತೃಪ್ತ ಶಾಸಕರ ಅನರ್ಹಗೊಳಿಸುವ ಸಂಬಂಧ ಸಿದ್ದರಾಮಯ್ಯ ಅವರು ವಕೀಲ ಶಶಿಕಿರಣ ಮತ್ತು ತಂಡದಿಂದ ಕಾನೂನು ಸಲಹೆ ಪಡೆದು, ಬಳಿಕ ಸ್ಪೀಕರ್​ಗೆ ದೂರು ನೀಡಿದ್ದಾರೆ.
ಪತ್ರಿಕಾ ವರದಿಗಳು, ಮಾಧ್ಯಮಕ್ಕೆ ನೀಡಿದ ಪ್ರತಿಕ್ರಿಯೆ, ಸಿಎಲ್​ಪಿ ಸಂಬಂಧ ನೀಡಿದ ನೊಟೀಸ್ ಪ್ರತಿಗಳ ಸಮೇತ 82 ಪುಟಗಳ ದೂರಿನ ಪ್ರತಿಯನ್ನು ಸ್ಪೀಕರ್​ಗೆ ಸಲ್ಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT