ಸ್ಪೀಕರ್ ಗೆ ದೂರು ನೀಡುತ್ತಿರುವ ಕಾಂಗ್ರೆಸ್ ನಾಯಕರು 
ರಾಜಕೀಯ

ನಾಲ್ವರು ಅತೃಪ್ತ​ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ​ಗೆ ಕಾಂಗ್ರೆಸ್ ದೂರು

ವಿಪ್ ಸೇರಿದಂತೆ ಪಕ್ಷದ ಎಲ್ಲಾ ಆದೇಶಗಳನ್ನು​ ಉಲ್ಲಂಘಿಸಿದ ಕಾಂಗ್ರೆಸ್ ನ ನಾಲ್ವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ....

ಬೆಂಗಳೂರು: ವಿಪ್ ಸೇರಿದಂತೆ ಪಕ್ಷದ ಎಲ್ಲಾ ಆದೇಶಗಳನ್ನು​ ಉಲ್ಲಂಘಿಸಿದ ಕಾಂಗ್ರೆಸ್ ನ ನಾಲ್ವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ದೂರು ನೀಡಿದ್ದಾರೆ.
ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರು, ಪಕ್ಷದ ಶಾಸಕಾಂಗ ಸಭೆಗೆ ಹಾಜರಾಗುವಂತೆ ನೀಡಿದ್ದ ವಿಪ್​ ಉಲ್ಲಂಘನೆ, ನೋಟಿಸ್ ಗೆ ಸಮರ್ಪಕ ಉತ್ತರ ನೀಡದೆ ಇರುವುದು ಹಾಗೂ ಬಜೆಟ್​ ಅಧಿವೇಶನಕ್ಕೂ ಗೈರಾದ ರಮೇಶ್​ ಜಾರಕಿಹೊಳಿ, ಮಹೇಶ್​ ಕುಮಟಳ್ಳಿ, ಉಮೇಶ್​ ಜಾಧವ್​ ಹಾಗೂ ನಾಗೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದೂರು ನೀಡಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಪರಮೇಶ್ವರ್, ಸಚಿವ ಕೃಷ್ಣಬೈರೇಗೌಡ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಾಥ್ ನೀಡಿದರು.
ಅತೃಪ್ತ ಶಾಸಕರ ಅನರ್ಹಗೊಳಿಸುವ ಸಂಬಂಧ ಸಿದ್ದರಾಮಯ್ಯ ಅವರು ವಕೀಲ ಶಶಿಕಿರಣ ಮತ್ತು ತಂಡದಿಂದ ಕಾನೂನು ಸಲಹೆ ಪಡೆದು, ಬಳಿಕ ಸ್ಪೀಕರ್​ಗೆ ದೂರು ನೀಡಿದ್ದಾರೆ.
ಪತ್ರಿಕಾ ವರದಿಗಳು, ಮಾಧ್ಯಮಕ್ಕೆ ನೀಡಿದ ಪ್ರತಿಕ್ರಿಯೆ, ಸಿಎಲ್​ಪಿ ಸಂಬಂಧ ನೀಡಿದ ನೊಟೀಸ್ ಪ್ರತಿಗಳ ಸಮೇತ 82 ಪುಟಗಳ ದೂರಿನ ಪ್ರತಿಯನ್ನು ಸ್ಪೀಕರ್​ಗೆ ಸಲ್ಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT