ರಾಜಕೀಯ

ಪಕ್ಷ ತೊರೆಯುವುದಿಲ್ಲ, ಸರ್ಕಾರ ಬೀಳಿಸುವುದಿಲ್ಲ: ಉಲ್ಟಾ ಹೊಡೆದ ಉಮೇಶ್ ಜಾಧವ್

Shilpa D
ಬೆಂಗಳೂರು: ನಾನು ಕಾಂಗ್ರೆಸ್‌ ಪಕ್ಷದಲ್ಲೇ ಇರುತ್ತೇನೆ, ಸರ್ಕಾರ ಬೀಳಿಸುವ ಕೆಲಸ ನಾನೆಂದೂ ಮಾಡಿಲ್ಲ, ಮಾಡುವುದು ಇಲ್ಲ, ಕಾಂಗ್ರೆಸ್ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ ಎಂದು ಚಿಂಚೋಳಿ ಶಾಸಕ ಉಮೇಶ್ ಜಾಧವ್ ಸ್ಪಷ್ಟಪಡಿಸಿದ್ದಾರೆ. 
ಕಳೆದ ಒಂದು ವಾರದಿಂದ ಕಣ್ಮರೆಯಾಗಿದ್ದ ಉಮೇಶ್‌ ಯಾದವ್‌, ಇಂದು ಬೆಂಗಳೂರಿಗೆ ಆಗಮಿಸಿದರು.  ಈ ವೇಳೆ ಮಾತನಾಡಿದ ಅವರು ಬಿಜೆಪಿ ಸೇರ್ಪಡೆ ಹಾಗೂ ಸರ್ಕಾರ ಬೀಳಿಸುವ ಕೆಲಸ ಮಾಡಲಾಗುತ್ತಿದೆ ಎಂಬ ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಿದ್ದಾರೆ. 
ವೈಯಕ್ತಿಕ ಕಾರಣದಿಂದಾಗಿ ನಾನು ಸಿಎಲ್ ಪಿ ಸಭೆಗೆ ಬಂದಿರಲಿಲ್ಲ. ತಾನು ಕ್ಷೇತ್ರದಲ್ಲಿಯೇ ಇದ್ದೆ. ಈ ಬಗ್ಗೆ  ನಾಯಕರ ಜೊತೆ ಮಾತಾನಾಡುತ್ತೇನೆ. ನಾನು ಪಕ್ಷಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಸ್ಥಳೀಯವಾಗಿ ನನ್ನ ಕ್ಷೇತ್ರದಲ್ಲಿ ಸಮಸ್ಯೆಗಳಿವೆ. ಅದನ್ನು ನಮ್ಮ ನಾಯಕರಿಗೆ ಮನವರಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಇಂದು ಮುಂಜಾನೆ ಶಾಸಕರ ಭವನದಲ್ಲಿರುವ ಕೊಠಡಿಗೆ  ಉಮೇಶ್ ಜಾಧವ್ ಆಗಮಿಸಿದ್ದರು.
SCROLL FOR NEXT