ಶರಣಗೌಡ ಕಂದಕೂರು 
ರಾಜಕೀಯ

ಆಪರೇಷನ್ ಆಡಿಯೋ: ರಾಯಚೂರು ಎಸ್ ಪಿಗೆ ದೂರು ನೀಡಿದ ಶರಣಗೌಡ

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಭಾಗಿಯಾಗಿರುವ ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ...

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಭಾಗಿಯಾಗಿರುವ ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ನಾಗನಗೌಡ ಪಾಟೀಲ್ ಕಂದಕೂರು ಅವರ ಪುತ್ರ ಹಾಗೂ, ಪ್ರಕರಣದ ರೂವಾರಿ ಶರಣಗೌಡ ಕಂದಕೂರು ಅವರು ಬುಧವಾರ ರಾಯಚೂರು ಎಸ್​ಪಿಗೆ ದೂರು ನೀಡಿದ್ದಾರೆ.
ಇಂದು ಮಧ್ಯಾಹ್ನ ತಮ್ಮ ಬೆಂಬಲಿಗರೊಂದಿಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಕಿಶೋರ್ ಬಾಬು ಅವರನ್ನು ಭೇಟಿ ಮಾಡಿದ ಶರಣಗೌಡ ಅವರು, ಬಿಜೆಪಿ ಸೇರಲು ತಮಗೆ ಆಮಿಷ ಒಡ್ಡಿದ ಬಿಎಸ್ ಯಡಿಯೂರಪ್ಪ, ಶಾಸಕರಾದ ಶಿವನಗೌಡ ನಾಯಕ್ ಹಾಗೂ ಪ್ರೀತಂ ಗೌಡ ಅವರ ವಿರುದ್ಧ ದೂರು ನೀಡಿದ್ದಾರೆ.
ತಮ್ಮೊಂದಿಗೆ ಸಂವಾದ ನಡೆಸಿದ ಯಡಿಯೂರಪ್ಪ, ಶಿವನಗೌಡ ನಾಯಕ ಹಾಗೂ ಪ್ರೀತಮ್ ಗೌಡ ವಿರುದ್ಧ ದೇವದುರ್ಗಾ ಪೊಲೀಸರಿಗೆ ದೂರು ನೀಡಲು ಶರಣಗೌಡ ನಿರ್ಧರಿಸಿದ್ದರು. ಆದರೆ ದೇವದುರ್ಗದಲ್ಲಿ ಭದ್ರತಾ ಅಪಾಯವಿದ್ದರಿಂದ ಪ್ಲಾನ್ ಬದಲಾಗಿ ಕೊನೆಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.
ಬಜೆಟ್​ಗೆ ಹಿಂದಿನ ದಿನ, ಅಂದರೆ ಫೆಬ್ರವರಿ 7ರ ರಾತ್ರಿ ದೇವದುರ್ಗಾದಲ್ಲಿ ಯಡಿಯೂರಪ್ಪ, ಶಿವನಗೌಡ ನಾಯಕ ಮತ್ತಿತರರನ್ನು ಭೇಟಿಯಾಗಿ ಮಾತುಕತೆ ನಡೆಸುವಾಗ ಶರಣಗೌಡ ಅವರು ಆಡಿಯೋ ರೆಕಾರ್ಡ್ ಮಾಡಿಕೊಂಡಿದ್ದರು. ಅದರಲ್ಲಿ, ಶರಣುಗೌಡ ಅವರಿಗೆ ತಮ್ಮ ತಂದೆಯನ್ನು ಬಿಜೆಪಿಗೆ ಬರಲು ಒಪ್ಪಿಸಿದರೆ ಶಾಸಕ ಹಾಗೂ ಮಂತ್ರಿಸ್ಥಾನ ಕೊಡುವುದಾಗಿ ಆಮಿಷ ಒಡ್ಡಲಾಯಿತು. ಹಾಗೆಯೇ ಕೋಟಿಗಟ್ಟಲೆ ದುಡ್ಡನ್ನೂ ತಲುಪಿಸುವುದಾಗಿ ಭರವಸೆ ನೀಡಲಾಗಿದ್ದು, ಅದರ ಆಡಿಯೋ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?