ಶರಣಗೌಡ ಕಂದಕೂರು 
ರಾಜಕೀಯ

ಆಪರೇಷನ್ ಆಡಿಯೋ: ರಾಯಚೂರು ಎಸ್ ಪಿಗೆ ದೂರು ನೀಡಿದ ಶರಣಗೌಡ

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಭಾಗಿಯಾಗಿರುವ ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ...

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಭಾಗಿಯಾಗಿರುವ ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ನಾಗನಗೌಡ ಪಾಟೀಲ್ ಕಂದಕೂರು ಅವರ ಪುತ್ರ ಹಾಗೂ, ಪ್ರಕರಣದ ರೂವಾರಿ ಶರಣಗೌಡ ಕಂದಕೂರು ಅವರು ಬುಧವಾರ ರಾಯಚೂರು ಎಸ್​ಪಿಗೆ ದೂರು ನೀಡಿದ್ದಾರೆ.
ಇಂದು ಮಧ್ಯಾಹ್ನ ತಮ್ಮ ಬೆಂಬಲಿಗರೊಂದಿಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಕಿಶೋರ್ ಬಾಬು ಅವರನ್ನು ಭೇಟಿ ಮಾಡಿದ ಶರಣಗೌಡ ಅವರು, ಬಿಜೆಪಿ ಸೇರಲು ತಮಗೆ ಆಮಿಷ ಒಡ್ಡಿದ ಬಿಎಸ್ ಯಡಿಯೂರಪ್ಪ, ಶಾಸಕರಾದ ಶಿವನಗೌಡ ನಾಯಕ್ ಹಾಗೂ ಪ್ರೀತಂ ಗೌಡ ಅವರ ವಿರುದ್ಧ ದೂರು ನೀಡಿದ್ದಾರೆ.
ತಮ್ಮೊಂದಿಗೆ ಸಂವಾದ ನಡೆಸಿದ ಯಡಿಯೂರಪ್ಪ, ಶಿವನಗೌಡ ನಾಯಕ ಹಾಗೂ ಪ್ರೀತಮ್ ಗೌಡ ವಿರುದ್ಧ ದೇವದುರ್ಗಾ ಪೊಲೀಸರಿಗೆ ದೂರು ನೀಡಲು ಶರಣಗೌಡ ನಿರ್ಧರಿಸಿದ್ದರು. ಆದರೆ ದೇವದುರ್ಗದಲ್ಲಿ ಭದ್ರತಾ ಅಪಾಯವಿದ್ದರಿಂದ ಪ್ಲಾನ್ ಬದಲಾಗಿ ಕೊನೆಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.
ಬಜೆಟ್​ಗೆ ಹಿಂದಿನ ದಿನ, ಅಂದರೆ ಫೆಬ್ರವರಿ 7ರ ರಾತ್ರಿ ದೇವದುರ್ಗಾದಲ್ಲಿ ಯಡಿಯೂರಪ್ಪ, ಶಿವನಗೌಡ ನಾಯಕ ಮತ್ತಿತರರನ್ನು ಭೇಟಿಯಾಗಿ ಮಾತುಕತೆ ನಡೆಸುವಾಗ ಶರಣಗೌಡ ಅವರು ಆಡಿಯೋ ರೆಕಾರ್ಡ್ ಮಾಡಿಕೊಂಡಿದ್ದರು. ಅದರಲ್ಲಿ, ಶರಣುಗೌಡ ಅವರಿಗೆ ತಮ್ಮ ತಂದೆಯನ್ನು ಬಿಜೆಪಿಗೆ ಬರಲು ಒಪ್ಪಿಸಿದರೆ ಶಾಸಕ ಹಾಗೂ ಮಂತ್ರಿಸ್ಥಾನ ಕೊಡುವುದಾಗಿ ಆಮಿಷ ಒಡ್ಡಲಾಯಿತು. ಹಾಗೆಯೇ ಕೋಟಿಗಟ್ಟಲೆ ದುಡ್ಡನ್ನೂ ತಲುಪಿಸುವುದಾಗಿ ಭರವಸೆ ನೀಡಲಾಗಿದ್ದು, ಅದರ ಆಡಿಯೋ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT