ಶರಣಗೌಡ ಕಂದಕೂರು 
ರಾಜಕೀಯ

ಆಪರೇಷನ್ ಆಡಿಯೋ: ರಾಯಚೂರು ಎಸ್ ಪಿಗೆ ದೂರು ನೀಡಿದ ಶರಣಗೌಡ

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಭಾಗಿಯಾಗಿರುವ ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ...

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಭಾಗಿಯಾಗಿರುವ ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ನಾಗನಗೌಡ ಪಾಟೀಲ್ ಕಂದಕೂರು ಅವರ ಪುತ್ರ ಹಾಗೂ, ಪ್ರಕರಣದ ರೂವಾರಿ ಶರಣಗೌಡ ಕಂದಕೂರು ಅವರು ಬುಧವಾರ ರಾಯಚೂರು ಎಸ್​ಪಿಗೆ ದೂರು ನೀಡಿದ್ದಾರೆ.
ಇಂದು ಮಧ್ಯಾಹ್ನ ತಮ್ಮ ಬೆಂಬಲಿಗರೊಂದಿಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಕಿಶೋರ್ ಬಾಬು ಅವರನ್ನು ಭೇಟಿ ಮಾಡಿದ ಶರಣಗೌಡ ಅವರು, ಬಿಜೆಪಿ ಸೇರಲು ತಮಗೆ ಆಮಿಷ ಒಡ್ಡಿದ ಬಿಎಸ್ ಯಡಿಯೂರಪ್ಪ, ಶಾಸಕರಾದ ಶಿವನಗೌಡ ನಾಯಕ್ ಹಾಗೂ ಪ್ರೀತಂ ಗೌಡ ಅವರ ವಿರುದ್ಧ ದೂರು ನೀಡಿದ್ದಾರೆ.
ತಮ್ಮೊಂದಿಗೆ ಸಂವಾದ ನಡೆಸಿದ ಯಡಿಯೂರಪ್ಪ, ಶಿವನಗೌಡ ನಾಯಕ ಹಾಗೂ ಪ್ರೀತಮ್ ಗೌಡ ವಿರುದ್ಧ ದೇವದುರ್ಗಾ ಪೊಲೀಸರಿಗೆ ದೂರು ನೀಡಲು ಶರಣಗೌಡ ನಿರ್ಧರಿಸಿದ್ದರು. ಆದರೆ ದೇವದುರ್ಗದಲ್ಲಿ ಭದ್ರತಾ ಅಪಾಯವಿದ್ದರಿಂದ ಪ್ಲಾನ್ ಬದಲಾಗಿ ಕೊನೆಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.
ಬಜೆಟ್​ಗೆ ಹಿಂದಿನ ದಿನ, ಅಂದರೆ ಫೆಬ್ರವರಿ 7ರ ರಾತ್ರಿ ದೇವದುರ್ಗಾದಲ್ಲಿ ಯಡಿಯೂರಪ್ಪ, ಶಿವನಗೌಡ ನಾಯಕ ಮತ್ತಿತರರನ್ನು ಭೇಟಿಯಾಗಿ ಮಾತುಕತೆ ನಡೆಸುವಾಗ ಶರಣಗೌಡ ಅವರು ಆಡಿಯೋ ರೆಕಾರ್ಡ್ ಮಾಡಿಕೊಂಡಿದ್ದರು. ಅದರಲ್ಲಿ, ಶರಣುಗೌಡ ಅವರಿಗೆ ತಮ್ಮ ತಂದೆಯನ್ನು ಬಿಜೆಪಿಗೆ ಬರಲು ಒಪ್ಪಿಸಿದರೆ ಶಾಸಕ ಹಾಗೂ ಮಂತ್ರಿಸ್ಥಾನ ಕೊಡುವುದಾಗಿ ಆಮಿಷ ಒಡ್ಡಲಾಯಿತು. ಹಾಗೆಯೇ ಕೋಟಿಗಟ್ಟಲೆ ದುಡ್ಡನ್ನೂ ತಲುಪಿಸುವುದಾಗಿ ಭರವಸೆ ನೀಡಲಾಗಿದ್ದು, ಅದರ ಆಡಿಯೋ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT