ರಮೇಶ್ ಕುಮಾರ್ 
ರಾಜಕೀಯ

'ರೇಪ್ ಸಂತ್ರಸ್ಥೆ' ಹೇಳಿಕೆಗೆ​ ಕ್ಷಮೆಯಾಚಿಸಿದ ಸ್ಪೀಕರ್ ರಮೇಶ್ ಕುಮಾರ್

ವಿಧಾನಸಭೆಯಲ್ಲಿ ತಮ್ಮ ಪರಿಸ್ಥಿತಿ ರೇಪ್ ಗೆ ಒಳಗಾದ ಮಹಿಳೆಯಂತಾಗಿದೆ ಎಂದು ಹೇಳಿದ್ದ ಸ್ಪೀಕರ್​ ರಮೇಶ್​ ಕುಮಾರ್​ ಅವರು ಅವರು ಬುಧವಾರ...

ಬೆಂಗಳೂರು: ವಿಧಾನಸಭೆಯಲ್ಲಿ ತಮ್ಮ ಪರಿಸ್ಥಿತಿ ರೇಪ್ ಗೆ ಒಳಗಾದ ಮಹಿಳೆಯಂತಾಗಿದೆ ಎಂದು ಹೇಳಿದ್ದ ಸ್ಪೀಕರ್​ ರಮೇಶ್​ ಕುಮಾರ್​ ಅವರು ಅವರು ಬುಧವಾರ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದು, ರೇಪ್​ ಪದವನ್ನು ಕಡತದಿಂದ ತೆಗೆಯುವಂತೆ ಸೂಚಿಸಿದ್ದಾರೆ.
ನನ್ನ ಹೇಳಿಕೆಯಿಂದ ಯಾರಿಗಾದರೂ ವಿಶೇಷವಾಗಿ ಮಹಿಳೆಯರಿಗೆ ನೋವಾಗಿದ್ದರೆ, ಅಥವಾ ಅವಮಾನವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಮಹಿಳೆಯರ ಭಾವನೆಗೆ ಧಕ್ಕೆ ಉಂಟು ಮಾಡುವ ಉದ್ದೇಶ ನನಗೆ ಇಲ್ಲ ಎಂದು ಸ್ಪೀಕರ್ ಹೇಳಿದರು.
ಶಾಸಕಿಯರಾದ ಅನಿತಾ ಕುಮಾರಸ್ವಾಮಿ, ಅಂಜಲಿ ನಿಂಬಾಳ್ಕರ್ ರೂಪಕಲಾ ಶಶಿಧರ್, ಲಕ್ಷ್ಮಿ ಹೆಬ್ಬಾಳ್ಕರ್, ಫಾತಿಮಾ, ಸೌಮ್ಯ ರೆಡ್ಡಿ ಹಾಗೂ ವಿನಿಶಾ ಅವರು ನನ್ನನ್ನು ಭೇಟಿ ಮಾಡಿ ರೇಪ್ ಸಂತ್ರಸ್ಥೆ ಹೇಳಿಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಸ್ಪೀಕರ್ ಸದನಕ್ಕೆ ತಿಳಿಸಿದರು.
ನಿನ್ನೆ ಸದನದಲ್ಲಿ ಆಪರೇಷನ್ ಕಮಲ ಆಡಿಯೋ ಟೇಪ್ ಗೆ ಸಂಬಂಧಿಸಿದಂತೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದ್ದ ವೇಳೆ ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರು ಪದೇ ಪದೆ ತಮ್ಮ ಹೆಸರು ಪ್ರಸ್ತಾಪ ಮಾಡುತ್ತಿರುವುದನ್ನು ನೋಡಿ, ತಮ್ಮ ಪರಿಸ್ಥಿತಿ ರೇಪ್ ಸಂತ್ರಸ್ಥೆಯಂತಾಗಿದೆ ಎಂದು ಸ್ಪೀಕರ್ ಚಟಾಕಿ ಹಾರಿಸಿದ್ದರು.
ಸ್ಪೀಕರ್ ರೇಪ್​ ಪದ ಬಳಕೆಗೆ ಶಾಸಕಿಯರಿಂದ ಹಾಗೂ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸ್ಪೀಕರ್​ ಸದನದಲ್ಲಿ ಕ್ಷಮೆ ಯಾಚಿಸಿದ್ದಾರೆ.
ಕಲಾಪ ನಾಳೆಗೆ ಮುಂದೂಡಿಕೆ
ಸದನದಲ್ಲಿ ಬಿಜೆಪಿ ಸದಸ್ಯರ ಧರಣಿ ಮುಂದುವರಿದ ಹಿನ್ನೆಲೆಯಲ್ಲಿ ಸ್ಪೀಕರ್​ ಕಲಾಪವನ್ನು ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!