ರಾಜಕೀಯ

'8 ತಿಂಗಳಿಂದ ಸಿಎಂರನ್ನು ಗೋಳಾಡಿಸುತ್ತಿದ್ದೀರಿ, ಇಲ್ಲಿಗೆ ನಿಲ್ಲಿಸದಿದ್ದರೇ ಶಾಪ ತಟ್ಟುತ್ತದೆ'

Shilpa D
ಬೆಂಗಳೂರು: ಮನೆಯಿಂದ ಹೊರಟರೆ ಹೆಂಡತಿ, ಮಕ್ಕಳು ಅನುಮಾನದಿಂದ ನೋಡುತ್ತಾರೆ ಎಂದು  ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ಜೆಡಿಎಸ್‌ನ ಶಿವಲಿಂಗೇಗೌಡ ಅವರು ಮೇಲಿನ ಸಾಲು ಉಲ್ಲೇಖೀಸುವ ಮೂಲಕ ಶಾಸಕರ ಸ್ಥಿತಿ ಬಗ್ಗೆ ಬೆಳಕು ಚೆಲ್ಲಲು ಯತ್ನಿಸಿದರು. 
ಈ ಹಿಂದೆ ಶಾಸಕರ ಬಗ್ಗೆ ಅಪಾರ ಗೌರವವಿತ್ತು.ಇಂದು ಅದು ಯಾವ ಮಟ್ಟಕ್ಕೆ ಹೋಗಿದೆ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಮನೆಯಿಂದ ಹೊರಟರೆ ಹೆಂಡತಿ, ಮಕ್ಕಳು ಅನುಮಾನದಿಂದ ನೋಡುತ್ತಾರೆ. ಏನೇನೋ ಡೀಲ್‌ ನಡೆಯುತ್ತಿದೆ ಎಂದು ಅಪಪ್ರಚಾರ ನಡೆಯುತ್ತಿದೆ. ಗೌರವದಿಂದ ಹೋಗಿ ಬನ್ನಿ ಎನ್ನುತ್ತಾರೆ. ಇವರು ಯಾರೊಬ್ಬರನ್ನೂ ಬಿಟ್ಟಿಲ್ಲ. ತರಹೇವಾರಿ ಆಮಿಷ ಒಡ್ಡಲಾಗುತ್ತಿದೆ ಎಂದು ಶಿವಲಿಂಗೇಗೌಡ ಬೇಸರ ವ್ಯಕ್ತಪಡಿಸಿದರು.
ಸಮ್ಮಿಶ್ರ ಸರ್ಕಾರವನ್ನು ತೆಗೆಯಲು ಎಷ್ಟು ವಿದ್ಯಮಾನ ನಡೆಸು ವುದು? 8 ತಿಂಗಳಿನಿಂದ ನಡೆಯುತ್ತಲೇ ಇದೆ. ಸ್ವಲ್ಪ ವಾದರೂ ಆತ್ಮಗೌರವ ಇಲ್ಲವೇ? 8 ತಿಂಗಳಿನಿಂದ ಮುಖ್ಯಮಂತ್ರಿಗಳು ಇಷ್ಟೊಂದು ಗೋಳು ಹೊಯ್ದುಕೊಂಡರೆ ಶಾಪ ತಟ್ಟದೇ ಬಿಡುತ್ತದೆಯೇ? ನಿಮಗೆ ಶಾಪ ತಟ್ಟಲಿದೆ. ನಿಮ್ಮ ನಾಟಕಕ್ಕೆ ತೆರೆ ಎಳೆಯಿರಿ. ಕೆಟ್ಟ ಕೆಲಸ ವಿರೋಧಿಸಿ ಎಂದು ಶಿವಲಿಂಗೇಗೌಡ ಮನವಿ ಮಾಡಿದ್ದಾರೆ.
SCROLL FOR NEXT