ಯಡಿಯೂರಪ್ಪ 
ರಾಜಕೀಯ

ಗೂಂಡಾ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ: ಯಡಿಯೂರಪ್ಪ ಗುಡುಗು

ರಾಜ್ಯ ಸಮ್ಮಿಶ್ರ ಸರ್ಕಾರ ಗೂಂಡಾ ಸರ್ಕಾರವಾಗಿದೆ, ರಾಜ್ಯದಲ್ಲಿ ಶಾಸಕರಿಗೆ ರಕ್ಷಣೆ ಇಲ್ಲ ಎಂದ ಮೇಲೆ ಸಾಮಾನ್ಯ ಜನರ ಪಾಡೇನು ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್ ...

ಹಾಸನ: ರಾಜ್ಯ ಸಮ್ಮಿಶ್ರ ಸರ್ಕಾರ ಗೂಂಡಾ ಸರ್ಕಾರವಾಗಿದೆ, ರಾಜ್ಯದಲ್ಲಿ ಶಾಸಕರಿಗೆ ರಕ್ಷಣೆ ಇಲ್ಲ ಎಂದ ಮೇಲೆ ಸಾಮಾನ್ಯ  ಜನರ ಪಾಡೇನು ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್ ಯಡಿಯೂರಪ್ಪ ಪ್ರಶ್ನಿಸಿದ್ದಾರೆ.
ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ದಾಳಿ ನಡೆಸಿ, ಓರ್ವ ಗಾಯಗೊಂಡ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಅವರು ಶಾಸಕರಿಗೆ ಭದ್ರತೆ ಕೊಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಹಾಸನದಲ್ಲಿ ಶಾಂತಿ ಕಾಪಾಡಿಕೊಳ್ಳಲು ಸಿಎಂ ವಿಫಲರಾಗಿರುವುದರಿಂದ ಅವರಿಗೆ ನೈತಿಕ ಹಕ್ಕು ಇಲ್ಲ, ಹಾಸನದಲ್ಲಿ ಯಾವುದೇ ಸವಾಲು ಎದುರಿಸಲು  ಬಿಜೆಪಿ ನಾಯಕರು ಸಿದ್ಧರಿದ್ದಾರೆ, ಹಾಸನ ಸಿಎಂ ತವರು ಜಿಲ್ಲೆಯಾಗಿರಬಹುದು, ಆದರೆ ಜೆಡಿಎಸ್ ಕೇವಲ 37 ಶಾಸಕರನ್ನು ಹೊಂದಿದೆ, ನಮ್ಮ ಬಳಿ 104 ಶಾಸಕರಿದ್ದಾರೆ ಎಂದು ಹೇಳಿದ್ದಾರೆ.
ಪ್ರೀತಂ ಅವರ ಮೇಲೆ ಹಲ್ಲೆ ನಡೆಸಲು ಜೆಡಿಎಸ್ ನಾಯಕರು ಸಂಚು ಮಾಡಿದ್ದಾರೆ, ಗುರುವಾರ ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಕರಣದ ಬಗ್ಗೆ ವಿವರಣೆ ನೀಡುವುದಾಗಿ ತಿಳಿಸಿದ್ದಾರೆ. ಜಿಲ್ಲಾ ಪೊಲೀಸರು ಆರೋಪಿಗಳ ವಿರುದ್ದ ಪ್ರಕರಣವನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ,
ಸದನದಲ್ಲಿ ಈ ವಿಷಯವನ್ನು ಚರ್ಚಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುವುದಾಗಿ ತಿಳಿಸಿದ ಯಡಿಯೂರಪ್ಪ, ಸರ್ಕಾರದ ಗೂಂಡಾಗಿರಿ ವಿರೋಧಿಸಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT