ವಿಧಾನಸಭೆ 
ರಾಜಕೀಯ

ಗದ್ದಲದ ನಡುವೆಯೇ ಹಣಕಾಸು ಮಸೂದೆಗೆ ವಿಧಾನಸಭೆ ಅನುಮೋದನೆ

ಬಿಜೆಪಿ ಸದಸ್ಯರ ಧರಣಿ, ಗದ್ದಲದ ನಡುವೆಯೇ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಮತ್ತು ಹಣಕಾಸು ಮಸೂದೆಗಳಿಗೆ ಗುರುವಾರ...

ಬೆಂಗಳೂರು: ಬಿಜೆಪಿ ಸದಸ್ಯರ ಧರಣಿ, ಗದ್ದಲದ ನಡುವೆಯೇ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಮತ್ತು ಹಣಕಾಸು ಮಸೂದೆಗಳಿಗೆ ಗುರುವಾರ ವಿಧಾನಸಭೆ ಅನುಮೋದನೆ ನೀಡಿದೆ. 
ರಾಜ್ಯಪಾಲ ವಜೂಭಾಯಿ ವಾಲಾ ಅವರು ಈ ತಿಂಗಳ 6 ರಂದು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ್ದ ಭಾಷಣದ ಮೇಲಿನ ವಂದನೆ ಸಲ್ಲಿಸುವ ನಿರ್ಣಯ ಕುರಿತ ಪ್ರಸ್ತಾವವನ್ನು ಧರಣಿ ನಡುವೆಯೇ ಅಂಗೀಕರಿಸಲಾಯಿತು. 
2019 - 2020ನೇ ಸಾಲಿನ 80168 ಕೋಟಿ ರೂ ಲೇಖಾನುದಾನ ಹಾಗೂ 14581 ಕೋಟಿ ರೂ ಪೂರಕ ಅಂದಾಜು ಧನ ವಿನಿಯೋಗ ಕುರಿತ ಹಣಕಾಸು ಮಸೂದೆಗಳಿಗೆ ಸದನ ಅಂಗೀಕರಿಸಿದೆ.
ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಬಿಜೆಪಿ ಸದಸ್ಯರ ಧರಣಿ ಮತ್ತು ಪ್ರತಿಭಟನೆ ನಡುವೆಯೇ ಮಸೂದೆಗಳನ್ನು ಮಂಡಿಸಿದರು. ಸಭಾಧ್ಯಕ್ಷ ರಮೇಶ್ ಕುಮಾರ್ ಮಸೂದೆಗಳನ್ನು ಮತಕ್ಕೆ ಹಾಕಿದಾಗ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಈ ಪ್ರಕ್ರಿಯೆ ಕೆಲವೇ ನಿಮಿಷಗಳಲ್ಲಿ ಮುಕ್ತಾಯವಾಯಿತು.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಳೆದ ಶುಕ್ರವಾರ 2.34 ಲಕ್ಷ ಕೋಟಿ ರೂ ಮೊತ್ತದ 2019 - 20 ನೇ ಸಾಲಿನ ಆಯವ್ಯಯ ಮಂಡಿಸಿದ್ದರು.
ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ನಿವಾಸದ ಮೇಲೆ ಜೆಡಿಎಸ್ ಕಾರ್ಯಕರ್ತರು ದಾಳಿ ನಡೆಸಿರುವ ಪ್ರಕರಣವನ್ನು ಮುಂದಿಟ್ಟುಕೊಂಡು, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಸದಸ್ಯರು ಸದನದಲ್ಲಿ ಧರಣಿ ನಡೆಸಿದರು. ಧರಣಿ ನಡುವೆಯೇ ಮಸೂದೆಗಳಿಗೆ ಅನುಮೋದನೆ ದೊರೆಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT