ಬಿಎಸ್ ಯಡಿಯೂರಪ್ಪ 
ರಾಜಕೀಯ

ಆಪರೇಷನ್ ಆಡಿಯೋ: ಎಫ್ ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಯಡಿಯೂರಪ್ಪ ಅರ್ಜಿ?

ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ...

ಬೆಂಗಳೂರು: ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕಲಬುರಗಿ ವಿಧಾಗಿಯ ಪೀಠಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಆಪರೇಷನ್ ಆಡಿಯೋಗೆ ಸಂಬಂಧಿಸಿದಂತೆ ಬಿಎಸ್ ವೈ ವಿರುದ್ದ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಇದನ್ನು ರದ್ದು ಕೋರಿ ಕಲಬುರಗಿ ವಿಭಾಗೀಯ ಪೀಠಕ್ಕೆ ಯಡಿಯೂರಪ್ಪ ಪರ ವಕೀಲರು ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಈ ಮೂಲಕ ತಮ್ಮ ವಿರುದ್ದದ ಆರೋಪಗಳನ್ನು ಕಾನೂನಾತ್ಮಕವಾಗಿ ಎದುರಿಸಲು ವೇದಿಕೆ ಸಜ್ಜುಗೊಳಿಸಿದ್ದಾರೆ. 
ಹೈಕೋರ್ಟ್ ನ ಕಲಬುರಗಿ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಲು ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಸಿದ್ದತೆ ಮಾಡಿಕೊಂಡಿದ್ದು, ಅವರೇ ವಕಾಲತ್ತು ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆಪರೇಷನ್ ಕಮಲದ ಪ್ರಕರಣದ ಧ್ವನಿ ಸುರುಳಿ ಬಿಡುಗಡೆ ಹಿನ್ನೆಲೆಯಲ್ಲಿ ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಫೆಬ್ರವರಿ 13ರಂದು ಎಫ್‍ಐಆರ್ ದಾಖಲಾಗಿತ್ತು. ಜೆಡಿಎಸ್ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ  ನೀಡಿದ್ದ ದೂರಿನ ಮೆರೆಗೆ ಪೊಲೀಸರ ತನಿಖೆ ಆರಂಭಗೊಂಡಿದೆ. 
ದೂರಿನಲ್ಲಿ ಬಿ.ಎಸ್ ಯಡಿಯೂರಪ್ಪ ಎ-1 ಆರೋಪಿಯಾಗಿದ್ದು, ನಂತರದಲ್ಲಿ ಶಿವನಗೌಡ ನಾಯಕ್, ಪ್ರೀತಂಗೌಡ, ಪತ್ರಕರ್ತ ಮರಂಕಲ್ ಸಹ ಆರೋಪಿಗಳಾಗಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆ 19/2019 ಕಲಂ 8 ಮತ್ತು 12 ಹಾಗೂ 120(ಬಿ), ಐಪಿಸಿ 506 ಕಾಯ್ದೆ ಅಡಿ ಈ ಅರೋಪಿಗಳ ವಿರುದ್ದ ಎಫ್‍ಐಆರ್  ದಾಖಲಾಗಿದೆ. ಆಡಿಯೋ ಸಿಡಿ ದಾಖಲೆಯೊಂದಿಗೆ ಶರಣಗೌಡ ಪ್ರಕರಣ ದಾಖಲಿಸಿದ್ದಾರೆ.
ಕಲಬುರಗಿ ಹೈಕೋರ್ಟ್ ಪೀಠದ ವ್ಯಾಪ್ತಿಗೆ ದೇವದುರ್ಗ ಪೊಲೀಸ್ ಠಾಣೆ ಬರುತ್ತದೆ. ಆದ್ದರಿಂದ ಗುರುವಾರ ಪ್ರಕರಣವೊಂದರ ವಾದ ಮಂಡನೆಗೆ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಆಗಮಿಸಿದ್ದ ಹಿರಿಯ ನ್ಯಾಯವಾದಿ ಹಾಗೂ ಯಡಿಯೂರಪ್ಪ ಪರ ವಕೀಲರಾದ ಸಿ.ವಿ.ನಾಗೇಶ್, ಎಫ್‍ಐಆರ್ ರದ್ದು ಕೋರಿ ಅರ್ಜಿ ಸಲ್ಲಿಕೆಗೆ ಪೂರಕ ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT