ನರೇಂದ್ರ ಮೋದಿ, ಹೆಚ್ ಡಿ ದೇವೇಗೌಡ 
ರಾಜಕೀಯ

ಭಯೋತ್ಪಾದಕರನ್ನು ಮುಗಿಸೋದಾದ್ರೆ ಮುಗಿಸಿ: ಪ್ರಧಾನಿ ಮೋದಿಗೆ ದೇವೇಗೌಡರ ಬೆಂಬಲ!

ಪಾಕಿಸ್ತಾನ ನೆಲಕ್ಕೆ ನುಗ್ಗಿ ಭಾರತೀಯ ವಾಯುಸೇನೆ ಏರ್ ಸ್ಟ್ರೈಕ್ ನಡೆಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ...

ಹಾಸನ: ಪಾಕಿಸ್ತಾನ ನೆಲಕ್ಕೆ ನುಗ್ಗಿ ಭಾರತೀಯ ವಾಯುಸೇನೆ ಏರ್ ಸ್ಟ್ರೈಕ್ ನಡೆಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯೋತ್ಪಾದಕರನ್ನು ಮುಗಿಸೋದಾದ್ರೆ ಮುಗಿಸಿ ನಿಮ್ಮಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ. 
ದೇಶದ ಮೇಲೆ ದಾಳಿ ನಡೆದಾಗ ನಾವೆಲ್ಲರೂ ಒಂದಾಗಿ ಹೋರಾಟ ಮಾಡಬೇಕು. ಉಗ್ರರನ್ನು ಮುಗಿಸುವುದಾದರೇ ಖಂಡಿತ ಮುಗಿಸಿ ಅದಕ್ಕೆ ನಮ್ಮ ಬೆಂಬಲವಿದೆ. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೈ ಜವಾನ್ ಜೈ ಕಿಸಾನ್ ಎಂಬ ಮಾತಿನಂತೆ ನಾವೆಲ್ಲರೂ ದೇಶಕ್ಕಾಗಿ ಒಗ್ಗಟ್ಟಾಗಬೇಕು ಎಂದು ದೇವೇಗೌಡ ಅವರ ಹೇಳಿದರು.
ಇದೇ ವೇಳೆ ರೈತರ ಕುರಿತು ಪ್ರಧಾನಿ ಮೋದಿ ಯಾವುದೇ ಯೋಜನೆಗಳನ್ನು ಮಾಡಿಲ್ಲ. ಆದರೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರತಿ ರೈತರ ಕುಟುಂಬಕ್ಕೆ 6 ಸಾವಿರ ರುಪಾಯಿ ನೀಡುತ್ತೇನೆ ಎಂದು ಹೇಳುತ್ತಿರುವುದು ಯಾವ ಉದ್ದೇಶಕ್ಕೆ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT