ಚಿತ್ರದುರ್ಗ: ಪಾಕಿಸ್ತಾನದ ಬಾಲಕೋಟ್ ನಲ್ಲಿರುವ ಉಗ್ರರ ನೆಲೆಗಳ ಮೇಲೆ ಸೇನೆಯು ನಡೆಸಿದ ವೈಮಾನಿಕ ದಾಳಿ ಬಿಜೆಪಿಗೆ ನೆರವಾಗಲಿದೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಸುಮಾರು 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಇದು ಸಹಾಯವಾಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಉಗ್ರ ನೆಲೆ ಮೇಲೆ ಇತ್ತೀಚೆಗೆ ಭಾರತೀಯ ವಾಯುಪಡೆ ನಡೆಸಿದ ದಾಳಿ ನರೇಂದ್ರ ಮೋದಿ ಅವರ ಪರವಾಗಿ ಕೆಲಸ ಮಾಡಲಿದೆ. ಲೋಕಸಭೆ ಚುನಾವಣೆಯಲ್ಲಿ 22 ಸೀಟುಗಳನ್ನು ಗೆಲ್ಲಲು ನೆರವಾಗಲಿದೆ, ದಾಳಿಯು ಯುವಜನರಲ್ಲಿ ಸಂತೋಷ ತಂದಿದ್ದು, ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ,.
ತೋಟಗಾರಿಕಾ ಸಚಿವ ಎಂ.ಸಿ ಮನಗೂಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಮಂತ್ರಿಯಾಗಿರ ಉನ್ನತ ಸ್ಥಾನದಲ್ಲಿರುವವರು ಇಂತಹ ಬೇಜವಾಬ್ಜಾರಿ ಹೇಳಿಕೆ ನೀಡಬಾರದು ಎಂದು ಆಗ್ರಹಿಸಿದ್ದಾರೆ.