ರಾಜಕೀಯ ಗುರು ಎಸ್ ಎಂ ಕೃಷ್ಣರನ್ನು ಭೇಟಿ ಮಾಡಿದ ಡಿಕೆಶಿ ಹೇಳಿದ್ದೇನು? 
ರಾಜಕೀಯ

ರಾಜಕೀಯ ಗುರು ಎಸ್ ಎಂ ಕೃಷ್ಣರನ್ನು ಭೇಟಿ ಮಾಡಿದ ಡಿಕೆಶಿ ಹೇಳಿದ್ದೇನು?

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೊಸವರ್ಷದ ಮೊದಲ ದಿನ ತಮ್ಮ ರಾಜಕೀಯ ಗುರು, ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.

ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೊಸವರ್ಷದ ಮೊದಲ ದಿನ ತಮ್ಮ ರಾಜಕೀಯ ಗುರು, ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.
ಹೊಸ ವರ್ಷದ ಮೊದಲ ದಿನ ಶುಭಾಶಯ ಹೇಳುವುದಕ್ಕಾಗಿ ಡಿಕೆಶಿ ಮಾಜಿ ಮುಖ್ಯಮಂತ್ರಿಗಳ ಮನೆಗೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ತಮ್ಮ ರಾಜಕೀಯ ಗುರುವಾದ ಎಸ್.ಎಂ.ಕೆ ಅವರಿಗೆ ಹೂಗುಚ್ಚ ನೀಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆಇದ್ದಾರೆ.
ಕಾಂಗ್ರೆಸ್ ನಲ್ಲಿ ಅತ್ಯುನ್ನತ ನಾಯಕರಾಗಿದ್ದ ಎಸ್.ಎಂ. ಕೃಷ್ಣ ಪಕ್ಷದಲ್ಲಿ ನಡೆದ ಕೆಲವು ಬೆಳವಣಿಗೆಗಳಿಂದ ಬೇಸತ್ತು ಭಾರತೀಯ ಜನತಾ ಪಕ್ಷ ಸೇರಿದರು. ಆ ನಂತರ ಕಾಂಗ್ರೆಸ್ ಮುಖಂಡರು ಕೃಷ್ಣ ಅವರಿಂದ ಅಂತರ ಕಾಪಾಡಿಕೊಂಡಿದ್ದರು. 
ಕೃಷ್ಣ ಬಿಜೆಪಿ ಸೇರುವುದಕ್ಕೆ ಮುನ್ನ ಡಿಕೆಶಿ ಅವರಿಗೆ ರಾಜಕೀಯದ ಗುರುವೇ ಆಗಿದ್ದರು.ಅಂತಹಾ ಗುರುವನ್ನು ಇಂದು ಡಿಕೆಶಿ ಭೇಟಿಯಾಗಿ ಶುಭಾಶಯ ಕೋರಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಭೇಟಿ ಬಳಿಕ ಸುದ್ದಿಗಾರಒಡನೆ ಮಾತನಾಡಿದ ಶಿವಕುಮಾರ್ "ನಾನು ಕೃಷ್ಣ ಅವರನ್ನು ಪಕ್ಷಕ್ಕೆ ಆಹ್ವಾನಿಸುವಷ್ಟು ದೊಡ್ಡವನಲ್ಲ. ನಮ್ಮೊಬ್ಬರದು ವೈಯುಕ್ತಿಕ ಬಾಂಧವ್ಯ. ಇದೊಂದು ವೈಕ್ಯುಕ್ತಿಕ ಮಟ್ಟದ ಭೇಟಿ ಮಾತ್ರ" ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT